• Sun. May 19th, 2024

ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಬೇಕಾಗಿದೆ: ಬೂದಿಕೋಟೆಯಲ್ಲಿ ಸಂಸದ ಮುನಿಸ್ವಾಮಿ.

PLACE YOUR AD HERE AT LOWEST PRICE

ಬೂತ್ ಮಟ್ಟದಿಂದ ಸಂಘಟನೆ ಮಾಡಿ ಬಂಗಾರಪೇಟೆ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನಾಗಿ ಮಾಡುವುದರ ಜೊತೆಗೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲಾಗುತ್ತದೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.
ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬೂತ್ ವಿಜಯ ಅಭಿಯಾನ ಮತ್ತು ಬೂತ್ ಸಮಿತಿ ರಚನೆ
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಉದ್ದೇಶದಿಂದ ಪ್ರತಿ ಬೂತ್‍ನಲ್ಲಿ 36 ಸದಸ್ಯರ ಸಮಿತಿಯನ್ನು ಮಾಡಲಾಗುತ್ತಿದೆ.
ಈ ಸಮಿತಿಯಲ್ಲಿ ಎಲ್ಲಾ ಸಮುದಾಯದವರು ಸದಸ್ಯರಾಗಿರುತ್ತಾರೆ. ಬೂತ್ ಸಮಿತಿ, ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರಗಳ ಮೂಲಕ ಪಕ್ಷದ  ಸಂಘಟನೆಗೆ ಒತ್ತು ನೀಡಲಾಗಿದೆ.
ಬೂತ್ ಸಮಿತಿಗಳ ಮೂಲಕ ಗ್ರಾಮದ ಪ್ರತಿಯೊಂದು ಬೂತ್‍ನಲ್ಲಿಯೂ ಬಿಜೆಪಿ ಕಾರ್ಯಕರ್ತರ ಮನೆಯ ಮೇಲೆ ಬಿಜೆಪಿ ಪಕ್ಷದ  ಬಾವುಟವನ್ನು ಕಟ್ಟಲಾಗುತ್ತಿದೆ.
ಬಿಜೆಪಿ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಾಗಿದ್ದು, ಕೋಲಾರ ಜಿಲ್ಲೆಯಲ್ಲಿ 3 ರಿಂದ 4 ಶಾಸಕರನ್ನು  ಆಯ್ಕೆ ಮಾಡಲು ಶ್ರಮಿಸಲಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹಾಗೂ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ.
ಶಾಸಕರು ತಮ್ಮ ಅಧಿಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮಾಡಿರುವ ಕಾರಣ ಎಲ್ಲೂ ಸಹ ಹೆಚ್ಚಾಗಿ ಮಾತಾಡ್ತಾ ಇಲ್ಲ. ಜೆಡಿಎಸ್ ಅಭ್ಯರ್ಥಿ ಮಲ್ಲೇಶ್  ಮುನಿಸ್ವಾಮಿ ಸಹ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ 50 ಸಾವಿರ ಗಳಷ್ಟು ಮತಗಳನ್ನು ಪಡೆದು ಚುನಾವಣೆ ನಂತರ ಕ್ಷೇತ್ರದಲ್ಲಿ ಎಲ್ಲೂ ಕಾಣಿಸಲಿಲ್ಲ.
 ಈಗ ಪುನಃ ಚುನಾವಣೆ ಬಂದ ಕಾರಣ ಕ್ಷೇತ್ರದಲ್ಲಿ ಸುತ್ತಾಡುತ್ತಿದ್ದಾರೆ,  ಮಲ್ಲೇಶ್ ಮುನಿಸ್ವಾಮಿ ಒಂದು ಬಾರಿಯೂ ಸಹ ಶಾಸಕ ಎನ್.ಎನ್.ನಾರಾಯಣಸ್ವಾಮಿ ಅವ್ಯವಹಾರಗಳ ಬಗ್ಗೆ ಧ್ವನಿ ಎತ್ತಿಲ್ಲ ಇದನ್ನ ನೋಡಿದರೆ ಇಬ್ಬರೂ ಸಹ ಒಂದೇ ನಾಣ್ಯದ ಎರಡು ಮುಖಗಳು ಇದ್ದಂಗೆ ಎಂದರು.
ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಯಾರಿಗೆ ಟಿಕೆಟ್ ನೀಡಿದರೂ ಸಹ ಮಾಜಿ ಶಾಸಕರಾದ ಬಿ.ಪಿ.ವೆಂಕಟಮುನಿಯಪ್ಪ, ಎಂ.ನಾರಾಯಣಸ್ವಾಮಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಿ.ವಿ.ಮಹೇಶ್ ಸೇರದಂತೆ ಎಲ್ಲಾ ಮುಖಂಡರು ಒಟ್ಟಾಗಿ ಕಾಂಗ್ರೆಸ್ ಶಾಸಕರನ್ನು ಸೋಲಿಸುತ್ತೇವೆ.
 ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ವಿವಿಧ ಪಕ್ಷಗಳಿಂದ ಹೆಚ್ಚು ಹೆಚ್ಚು ಮುಖಂಡರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಲೆಂದೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದರು.
ಸಂಸದ ಎಸ್.ಮುನಿಸ್ವಾಮಿ ಬೂದಿಕೋಟೆಯ ಎಲ್ಲಾ ರಸ್ತೆಗಳಲ್ಲಿ ಓಡಾಡಿ ಮನೆ ಮನೆಗೂ ಭೇಟಿ ನೀಡಿ ಮುಖಂಡರ ಹಾಗೂ ಕಾರ್ಯಕರ್ತರ ಮನೆಗಳ ಮೇಲೆ ಬಿಜೆಪಿ ಬಾವುಟ ಹಾರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಬೂತ್ ವಿಜಯ ಅಭಿಯಾನದ ಜಿಲ್ಲಾ ಸಂಚಾಲಕ ಕೆ.ಚಂದ್ರಾರೆಡ್ಡಿ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಿ.ವಿ.ಮಹೇಶ್, ತಾಲೂಕು ಪಂಚಾಯ್ತಿ ಮಾಜಿ ಸದಸ್ಯ ವಿ ಮಾರ್ಕಂಡೇಗೌಡ, ಬೂದಿಕೋಟೆ ವಿ.ಬಾಬು ಪುರಸಭೆ ಸದಸ್ಯ ಕಪಾಲಿ ಶಂಕರ್, ವಿಎಸ್‍ಎಸ್‍ಎನ್ ಅಧ್ಯಕ್ಷ
ಸೀತಾರಾಮಪ್ಪ, ಮುಖಂಡರಾದ ಬಿ.ರಮೇಶ್, ಮುತ್ತು, ಅನು ಚಂದ್ರಶೇಖರ್, ಕೆ.ನಾರಾಯಣಶೆಟ್ಟಿ, ಚಂದ್ರಪ್ಪ, ಸುರೇಶ್, ಹೋಟೆಲ್ ಬಾಬು ಮುಂತಾದವರಿದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!