• Sun. May 5th, 2024

ಕೆಜಿಎಫ್ ನಗರಸಭೆ ವ್ಯಾಪ್ತಿಯ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಿ:ನವಕರವೇ ಒತ್ತಾಯ.

PLACE YOUR AD HERE AT LOWEST PRICE

ಕೆಜಿಎಫ್ ನಗರಸಭೆ ವ್ಯಾಪ್ತಿಯ ಹೆನ್ರೀಸ್ ಲೈನಿನ ಬಳಿ ಇರುವ ಉದ್ಯಾನವನವನ್ನು ಅಭಿವೃದ್ಧಿಪಡಿಸಿರುವ ರೀತಿ ನಗರದ ಎಲ್ಲಾ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಬೇಕು ಎಂದು ನವ ಕರ್ನಾಟಕ ರಕ್ಷಣಾ ವೇದಿಕೆ ನಗರಸಭೆಯನ್ನು ಒತ್ತಾಯಿಸಿದೆ.

ಸಂಘಟನೆಯ ರಾಜ್ಯಾದ್ಯಕ್ಷ ಎಸ್.ಎನ್.ರಾಜಗೋಪಾಲಗೌಡ ನಗರಸಭೆಯಲ್ಲಿ ಅದ್ಯಕ್ಷ ವಳ್ಳಲ್ ಮುನಿಸ್ವಾಮಿರಿಗೆ ಮನವಿ ಸಲ್ಲಿಸಿ ಮಾತನಾಡಿ, ನಗರದ ಹೆನ್ರೀಸ್ ಬಳಿ ಇರುವ ಉದ್ಯಾನವನವನ್ನು ಅಭಿವೃದ್ಧಿಪಡಿಸಿರುವುದು ಉತ್ತಮ ಕೆಲಸವಾಗಿದೆ.

ಅದೇ ರೀತಿ ಕಿಂಗ್ ಜಾರ್ಜ್ ಹಾಲ್ ಬಳಿ ಉದ್ಯಾನವನ, ಗೌತಮನಗರದ ಬಳಿ ಉದ್ಯಾನವನ, 7ನೇ ಅಡ್ಡರಸ್ತೆಯಲ್ಲಿನ ನೆಹರು ಉದ್ಯಾನವನ, ನ್ಯಾಯಾಲಯದ ಪಕ್ಕದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನ ಅಭಿವೃದ್ಧಿಪಡಿಸಲು ಒತ್ತಾಯಿಸಿದರು.

ನಗರದ ಎಲ್ಲಾ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಿ ವಾಯು ವಿಹಾರಿಗಳಿಗೆ, ವಿಶ್ರಾಂತಿ ಪಡೆಯುವವರಿಗೆ ಮತ್ತು ಆಟವಾಡುವ ಮಕ್ಕಳಿಗೆ ಅನುಕೂಲ ಮಾಡಿಕೊಡಲು ಅವರು ಒತ್ತಾಯಿಸಿದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!