ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಕೆಜಿಎಫ್ ನಗರಸಭೆ ವ್ಯಾಪ್ತಿಯ ಹೆನ್ರೀಸ್ ಲೈನಿನ ಬಳಿ ಇರುವ ಉದ್ಯಾನವನವನ್ನು ಅಭಿವೃದ್ಧಿಪಡಿಸಿರುವ ರೀತಿ ನಗರದ ಎಲ್ಲಾ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಬೇಕು ಎಂದು ನವ ಕರ್ನಾಟಕ ರಕ್ಷಣಾ ವೇದಿಕೆ ನಗರಸಭೆಯನ್ನು ಒತ್ತಾಯಿಸಿದೆ.
ಸಂಘಟನೆಯ ರಾಜ್ಯಾದ್ಯಕ್ಷ ಎಸ್.ಎನ್.ರಾಜಗೋಪಾಲಗೌಡ ನಗರಸಭೆಯಲ್ಲಿ ಅದ್ಯಕ್ಷ ವಳ್ಳಲ್ ಮುನಿಸ್ವಾಮಿರಿಗೆ ಮನವಿ ಸಲ್ಲಿಸಿ ಮಾತನಾಡಿ, ನಗರದ ಹೆನ್ರೀಸ್ ಬಳಿ ಇರುವ ಉದ್ಯಾನವನವನ್ನು ಅಭಿವೃದ್ಧಿಪಡಿಸಿರುವುದು ಉತ್ತಮ ಕೆಲಸವಾಗಿದೆ.
ಅದೇ ರೀತಿ ಕಿಂಗ್ ಜಾರ್ಜ್ ಹಾಲ್ ಬಳಿ ಉದ್ಯಾನವನ, ಗೌತಮನಗರದ ಬಳಿ ಉದ್ಯಾನವನ, 7ನೇ ಅಡ್ಡರಸ್ತೆಯಲ್ಲಿನ ನೆಹರು ಉದ್ಯಾನವನ, ನ್ಯಾಯಾಲಯದ ಪಕ್ಕದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನ ಅಭಿವೃದ್ಧಿಪಡಿಸಲು ಒತ್ತಾಯಿಸಿದರು.
ನಗರದ ಎಲ್ಲಾ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಿ ವಾಯು ವಿಹಾರಿಗಳಿಗೆ, ವಿಶ್ರಾಂತಿ ಪಡೆಯುವವರಿಗೆ ಮತ್ತು ಆಟವಾಡುವ ಮಕ್ಕಳಿಗೆ ಅನುಕೂಲ ಮಾಡಿಕೊಡಲು ಅವರು ಒತ್ತಾಯಿಸಿದರು.