PLACE YOUR AD HERE AT LOWEST PRICE
ಜ.13 ರಂದು ಸಾರ್ವಜನಿಕರ ಕುಂದುಕೊರತೆಗಳನ್ನು ವಿಚಾರಣೆ ಮಾಡಲು ಸಂಸದ ಎಸ್.ಮುನಿಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಪುರಸಭೆ ಆವರಣದಲ್ಲಿ ಸಭೆ ಕರೆಯಲಾಗಿದೆ ಎಂದು ತಹಶೀಲ್ದಾರ್ ಎಂ.ದಯಾನಂದ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜ 13 ರಂದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಭೆ ಕರೆದಿದ್ದು, ಈ ಕುಂದುಕೊರತೆಗಳ ಸಭೆಯಲ್ಲಿ ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಪುರಸಭೆಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ ಲಿಖಿತ ದೂರುಗಳನ್ನು ಸ್ವೀಕರಿಸಲಾಗುವುದು.
ಸಭೆಯಲ್ಲಿ ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಿಗರು, ಪಂಚಾಯತ್ ರಾಜ್ ಇಲಾಖೆಯ ಗ್ರಾಪಂನ ಅಭಿವೃದ್ದಿ ಅದಿಕಾರಿಗಳು, ಎಂಜಿನಿಯರ್ಸ್ ಸೇರಿದಂತೆ ಈ ಮೂರೂ ಇಲಾಖೆಗಳ ಅದಿಕಾರಿ ಸಿಬ್ಬಂದಿ ಖುದ್ದು ಹಾಜರಾಗಲಿದ್ದು, ಈ ಇಲಾಖೆಗಳ ಸಂಬಂಧಪಟ್ಟಂತೆ ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.