• Fri. Apr 19th, 2024

ಜ.೧೪ ರಂದು ವಿವೇಕ್ ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಮಾಹಿತಿ ಮೇಳ‌ ಸಾಧಕರಿಗೆ ಸನ್ಮಾನ

PLACE YOUR AD HERE AT LOWEST PRICE

ಕೋಲಾರ ನಗರದ ವಿವೇಕ್ ಇನ್ಫೋಟೆಕ್‌ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಯ ವತಿಯಿಂದ ಜ.೧೪ ರ ಶನಿವಾರ ಬೆಳಿಗ್ಗೆ ೯.೩೦ ಗಂಟೆಗೆ ಇಲ್ಲಿನ ಟಿ.ಚನ್ನಯ್ಯ ರಂಗಮಂದಿರದಲ್ಲಿ, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯ ಕುರಿತು ಮಾಹಿತಿ ಮೇಳ, ಸಾಧಕರಿಗೆ ಸನ್ಮಾನ ಹಾಗೂ ಸಂವಾದ, ಸಂಸ್ಥೆಯ ೫ನೇ ವರ್ಷದ ವಾರ್ಷಿಕೋತ್ಸವ ಮತ್ತು ಒಂದು ದಿನದ ವಿಶೇಷ ಕಾರ್ಯಾಗಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎ.ಪ್ರಮೋದ್ ಕುಮಾರ್ ತಿಳಿಸಿದರು.

ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವಿಶೇಷ ಕಾರ್ಯಕ್ರಮಕ್ಕೆ ಕೆ.ಎ.ಎಸ್. ಅಽಕಾರಿಗಳಾದ ಎಂ. ಬಾಬು, ಕೆ.ಎನ್.ಚೈತ್ರ, ನವೀನ್ ಪ್ರಸಾದ್ ಕಟ್ಟೀಮನಿ, ರಾಜೇಶ್ವರಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಎಸ್.ಗಣೇಶ್ ಅವರು ಭಾಗವಹಿಸಲಿದ್ದಾರೆ.
ಕರ್ನಾಟಕದ ಪ್ರಸಿದ್ದ ಇತಿಹಾಸ ಉಪನ್ಯಾಸಕ ಧಾರವಾಡದ ಮೋಹನ್ ಶಿಂಧೆ ಅವರು ಕಾರ್ಯಾಗಾರದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇವರೊಂದಿಗೆ ವಿವಿಧ ವಿಷಯಗಳ ಸಂಪನ್ಮೂಲ ವ್ಯಕ್ತಿಗಳಾದ ಧಾರವಾಡದ ಮಹ್ಮದ್ ಇಲಿಯಾಸ್, ಅಮರೇಶ್ ರಾಥೋಡ್, ಕಿಶೋರ್ ಕುಮಾರ್, ಕೋಲಾರದ ಎಸ್.ಆರ್.ರಾಕೇಶ್, ಎಸ್.ಕಿರಣ್ ಕುಮಾರ್ ಸೇರಿದಂತೆ ಇತರರು ಮಾರ್ಗದರ್ಶನ ನೀಡಲಿದ್ದಾರೆ ಎಂದರು.

ಕಾರ್ಯಾಗಾರದಲ್ಲಿ ಈ ಹಿಂದಿನ ನೇಮಕಾತಿಗಳು ಮತ್ತು ಮುಂದಿನ ನೇಮಕಾತಿಗಳ ಕುರಿತು ಮಾಹಿತಿ ನೀಡಲಾಗುತ್ತದೆ. ಇದರ ಜೊತೆಗೆ ಕೆ.ಎ.ಎಸ್, ಪಿ.ಎಸ್.ಐ, ಪಿ.ಡಿ.ಓ, ಎಚ್.ಎಸ್.ಟಿ.ಆರ್, ಎಫ್.ಡಿ.ಎ, ಎಸ್.ಡಿ.ಎ, ಗ್ರೂಪ್-ಸಿ, ಟಿ.ಇ.ಟಿ, ಸಿ.ಇ.ಟಿ ಮತ್ತು ಪಿ.ಸಿ. ಸೇರಿದಂತೆ ವಿವಿಧ ಪರೀಕ್ಷೆಗಳ ಪಠ್ಯಕ್ರಮನ್ನು ನೀಡಲಾಗುತ್ತದೆ. ಇದರೊಂದಿಗೆ ಸಂಪನ್ಮೂಲ ವ್ಯಕ್ತಿಗಳು ಪರೀಕ್ಷಾ ದೃಷ್ಠಿಕೋನದಿಂದ ಅತ್ಯವಶ್ಯಕ ಮಾಹಿತಿಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ ಎಂದು ಹೇಳಿದರು.

ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಜಿ.ಮುರಳಿ ಮಾತನಾಡಿ, ಸಂಸ್ಥೆಯಲ್ಲಿ ನೂರಾರು ಸ್ಪರ್ಧಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದು, ಇದರಲ್ಲಿ ಸಂಸ್ಥೆಯ ಇಬ್ಬರು ಸಂಪನ್ಮೂಲ ವ್ಯಕ್ತಿಗಳು ಕೆ.ಎ.ಎಸ್, ಅದರಂತೆ ಸಂಸ್ಥೆಯ ವಿದ್ಯಾರ್ಥಿಗಳು ಜಿ.ಪಿ.ಎಸ್.ಟಿ.ಆರ್ ಶಿಕ್ಷಕರಾಗಿ, ಪೋಲಿಸ್ ಪೇದೆಗಳಾಗಿ, ಅನೇಕ ಮಂದಿ ಟಿ.ಇ.ಟಿ ಅರ್ಹತೆ ಪಡೆದಿದ್ದಾರೆ. ಇನ್ನುಳಿದಂತೆ ಹಲವರು ಪ್ರಗತಿ ಹಾದಿಯಲ್ಲಿದ್ದು ಈಗಾಗಲೆ ವಿವಿಧ ಪರಿಕ್ಷೆಯನ್ನು ಎದುರಿಸಿದ್ದು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ವಿವರಿಸಿದರು.

ಸಂಸ್ಥೆಯ ಮುಖ್ಯ ಸಂಪನ್ಮೂಲ ವ್ಯಕ್ತಿ ಎಸ್.ಆರ್.ರಾಕೇಶ್ ಮಾತನಾಡಿ, ಪ್ರಸಕ್ತ ವರ್ಷದಲ್ಲಿ ಸಾಕಷ್ಟು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು ಪ್ರತಿಯೊಬ್ಬ ಸ್ಪರ್ಧಾರ್ಥಿಗಳು ಇದಕ್ಕೆ ಸಿದ್ದತೆಯನ್ನು ನಡೆಸಿಕೊಳ್ಳಬೇಕಾಗಿರುತ್ತದೆ. ಅದರಂತೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಧಾರವಾಡ ಮತ್ತು ಬೆಂಗಳೂರಿನಿಂದ ವಿವಿಧ ಸಂಪನ್ಮೂಲ ವ್ಯಕ್ತಿಗಳನ್ನು ಕರೆಯಿಸಿ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲಿ ಬೋಧನೆ ಮಾಡಿಸಲಾಗುತ್ತಿದೆ. ಅದರಂತೆ ಪ್ರತಿ ಶನಿವಾರ ಮಾದರಿ ಪರೀಕ್ಷೆಗಳನ್ನು ಸಂಸ್ಥೆಯಲ್ಲಿ ನಡೆಸಲಾಗುತ್ತಿದೆ. ಇದರ ಜೊತೆಗೆ ಪ್ರತಿ ದಿನದ ಪ್ರಚಲಿತ ಘಟನೆಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಎಸ್.ಕಿರಣ್ ಕುಮಾರ್ ಮಾತನಾಡಿ, ಸಂಸ್ಥೆಯಿಂದ ಕಡುಬಡತನ ಹಾಗೂ ವಿಶೇಷ ಚೇತನ ಸ್ಪರ್ಧಾರ್ಥಿಗಳಿಗೆ ವಿಶೇಷ ರಿಯಾಯಿತಿ ಮತ್ತು ತೃತೀಯ ಲಿಂಗಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿಯನ್ನು ನೀಡಲಾಗುತ್ತಿದೆ. ಇದರನ್ನು ಪ್ರತಿಯೊಬ್ಬರೂ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆ.ಎಸ್.ಶಿವರಾಜ್, ಎನ್.ನವೀನ್ ಕುಮಾರ್ ಉಪಸ್ಥಿತರಿದ್ದರು.

Related Post

ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ
ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,
ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಬಿಜೆಪಿಯನ್ನು ಸೋಲಿಸಿ: ಮಂಜುನಾಥ್ ಅಣ್ಣಯ್ಯ

Leave a Reply

Your email address will not be published. Required fields are marked *

You missed

error: Content is protected !!