• Fri. Apr 26th, 2024

ದೇಶದ ವಿಕಾಸ ಪರ್ವ ಗ್ರಾಪಂಗಳ ಅಭಿವೃದ್ಧಿಯನ್ನು ಅವಲಂಬಿಸಿದೆ: ಪಿ ನಾರಾಯಣಪ್ಪ

PLACE YOUR AD HERE AT LOWEST PRICE

 

ಬಂಗಾರಪೇಟೆ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಛೇರಿಯಲ್ಲಿ ನಡೆದ   ಕರ್ನಾಟಕ ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸಭೆಯಲ್ಲಿ  ತಾಲೂಕು ಅಧ್ಯಕ್ಷರಾಗಿ ಕೆಸರಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ ನಾರಾಯಣಪ್ಪನವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಪಿ ನಾರಾಯಣಪ್ಪ, ಒಂದು ದೇಶದ ವಿಕಾಸ ಪರ್ವ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಯನ್ನು ಅವಲಂಬಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅತ್ಯಂತ ಪ್ರಾಮಾಣಿಕರಾಗಿ  ಕರ್ತವ್ಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದರು.

ಹಲವು ಒತ್ತಡಗಳ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರಕ್ಕೆ ಹೆದರದೆ ಕಾನೂನಿನ ಪರಿಮಿತಿಯಲ್ಲಿ ನಮ್ಮ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ಪಾಲನೆ ಮಾಡುತ್ತಿದ್ದಾರೆ. ಅಧಿಕಾರಿಗಳ ಮತ್ತು ಸಿಬ್ಬಂದಿಗೆ ಯಾವುದೇ ಸಮಸ್ಯೆ ಆದರೆ ತಕ್ಷಣ ಅವರ ಪರವಾಗಿ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಉಪಾಧ್ಯಕ್ಷರಾಗಿ ಚಂದ್ರಕಲಾ. ಖಜಾಂಚಿ ಶಂಕರ್ ಸಿ ವಿ. ಸಂಘಟನಾ ಕಾರ್ಯದರ್ಶಿ ವಸಂತ್. ಪ್ರಧಾನ ಕಾರ್ಯದರ್ಶಿ ಮಣಿ. ಗೌರವಾಧ್ಯಕ್ಷರಾಗಿ ಶ್ರೀನಿವಾಸ್ ರೆಡ್ಡಿ ಆಯ್ಕೆಯಾಗಿದ್ದರು.

ಈ ಸಂದರ್ಭದಲ್ಲಿ ಪಿಡಿಓ ಗಳಾದ ಸುರೇಶ್, ವಸಂತ್, ಶಂಕರ್, ಚಿತ್ರ, ಒಳಗೊಂಡಂತೆ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!