ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಗ್ರಾಮೀಣ ಭಾಗದ ಯುವ ಸಮುದಾಯದಲ್ಲಿ ಸುಪ್ತವಾಗಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಅನಾವರಣಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಸದುದ್ದೇಶದಿಂದ ಸರ್ಕಾರ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಿದೆ ಎಂದು ಗ್ರಾಪಂ ಮಾಜಿ ಸದಸ್ಯ .ಎಸ್.ಕೆ. ವಂಕಟರಾಮಯ್ಯ ತಿಳಿಸಿದರು.
ಬಂಗಾರಪೇಟೆ ತಾಲ್ಲೂಕು ಆಲಂಬಾಡಿ ಜ್ಯೋತಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಈ ರೀತಿಯ ಕ್ರೀಡೆಗಳ ಆಯೋಜನೆ ಮೂಲಕ ಕರ್ನಾಟಕ ಸರ್ಕಾರ ಗ್ರಾಮೀಣ ಭಾಗದ ಜನರ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಸಮಾಜದ ಮುನ್ನಲೆಗೆ ತರುವ ಗುರಿಯನ್ನು ಹೊಂದಿದೆ.
ಈ ಕ್ರೀಡಾಕೂಟದಲ್ಲಿ ವಾಲಿಬಾಲ್, ಕಬ್ಬಡಿ, ಕೊಕ್ಕೋ, ಏರ್ಪಡಿಸಲಾಗಿದ್ದು, ಪ್ರತಿಯೊಬ್ಬ ಕ್ರೀಡಾಪಟು ಸ್ಪರ್ಧಾ ಮನೋಭಾವನೆಯೊಂದಿಗೆ ತಮ್ಮ ಕೌಶಲ್ಯವನ್ನು ಅನಾವರಣ ಮಾಡಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡ ರಮೇಶ್ ಮಾತನಾಡಿ ಒಂದಾನೊಂದು ಕಾಲದಲ್ಲಿ ಕ್ರೀಡೆ ಎಂಬುದು ನಗರವಾಸಿಗಳಿಗೆ ಲಭ್ಯವಾಗುತ್ತಿತ್ತು ಗ್ರಾಮೀಣ ಪ್ರದೇಶದ ಜನರು ತಮ್ಮಲ್ಲಿರುವ ಕ್ರೀಡಾ ಕೌಶಲ್ಯಗಳನ್ನು ಪ್ರದರ್ಶನ ಮಾಡಲು ಅವಕಾಶ ಸಿಗುತ್ತಿರಲಿಲ್ಲ ಎಂದರು.
ಸರ್ಕಾರ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಕ್ರೀಡೆಯನ್ನು ಆಯೋಜಿಸಿತ್ತಿರುವುದು ಸ್ವಾಗತಾರ್ಹವಾಗಿದ್ದು ಆ ಮೂಲಕ ಪಂಚಾಯಿತಿಯ ಎಲ್ಲಾ ಕ್ರೀಡಾಪಟುಗಳು ಸಾಮರಸ್ಯ ಸಹಕಾರದೊಂದಿಗೆ ಸ್ಪರ್ಧಾ ಮನೋಭಾವನೆಯ ಮೂಲಕ ಭಾಗವಹಿಸಲು ಅನುಕೂಲವಾಗಿದೆ ಎಂದರು.
ಗ್ರಾಪಂ ಅಧ್ಯಕ್ಷರಾದ ನಾರಾಯಣಮ್ಮ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಉಪಾಧ್ಯಕ್ಷರಾದ ಚೌಡಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಕಲಾ, ಮುನಿರಾಜು, ಕೃಷ್ಣಪ್ಪ, ರಮೇಶ್, ನಾರಾಯಣಪ್ಪ ಕಲಾವಿದ ಮಾರುತಿಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.