ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಜೆಡಿಎಸ್ ಪಕ್ಷದ ಕೆಜಿಎಫ್ ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ನ್ಯೂಟೌನ್ರನ ರಮೇಶ್ ಬಾಬು ಅವರನ್ನು ಮರು ನೇಮಕ ಮಾಡಿ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ಹಾಗೂ ಜಿಲ್ಲಾ ಕಾರ್ಯಧ್ಯಕ್ಷನಟರಾಜ್ ಆದೇಶ ಪತ್ರ ನೀಡಿದ್ದಾರೆ.
ಕೋಲಾರ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ, ಕಾರ್ಯಧ್ಯಕ್ಷ ನಟರಾಜ್, ವಿಧಾನ ಪರಿಷತ್ ಸದಸ್ಯ ಗೋವಿಂದ್ ರಾಜು ಸಮ್ಮುಖದಲ್ಲಿ ಸಭೆ ನಡೆಸಿ, ಕೆಜಿಎಫ್ ನಗರ ಹಾಗೂ ಗ್ರಾಮಾಂತರ ಭಾಗದ ಮುಖಂಡರೊಂದಿಗೆ ಚರ್ಚಿಸಿ ಸರ್ವಾನುಮತದಿಂದ ಎರಡು ಘಟಕಗಳ ಅಧ್ಯಕ್ಷರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಕೆಜಿಎಫ್ ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಬೇತಮಂಗಲ ರಮೇಶ್ ಬಾಬು ಮರು ನೇಮಕವಾಗಿದ್ದು, ಕೆಜಿಏಫ್ ನಗರ ಘಟಕಕ್ಕೆ ಪ್ರಕಾಶಂರನ್ನು ನೇಮಿಸಿ ನೇಮಕಾತಿ ಆದೇಶ ಪತ್ರವನ್ನು ನೀಡಿದ್ದಾರೆ.
ಕೆಜಿಎಫ್ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಿ ಈ ಭಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಬೇಕೆಂದು ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಘಟಕದ ನಾಯಕರು ಸೂಚಿಸಿದ್ದಾರೆ.
ಈ ನೇಮಕಾತಿ ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ, ಕೆಜಿಎಫ್ ರಾಜೇಂದ್ರ, ನಗರ ಸಭೆ ಮಾಜಿ ಅಧ್ಯಕ್ಷ ದಯನಂದ್, ಮುಖಂಡರಾದ ನಲ್ಲೂರು ರವಿ, ಅನಂದ್ ಗೌಡ, ಭರತ್, ಮೂರ್ತಿ, ನಾರಾಯಣಸ್ವಾಮಿ, ರವಿ ಮೊದಲಾದವರಿದ್ದರು.