PLACE YOUR AD HERE AT LOWEST PRICE
ಕೋಲಾರ ಕ್ಷೇತ್ರದ ಪ್ರತಿ ಗ್ರಾಮದಲ್ಲಿ ಯುವಕರನ್ನ ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತರಬೇಕು ಎಂದು ಮಾಜಿ ಸಚಿವ ಆರ್.ವರ್ತೂರು ಪ್ರಕಾಶ್ ಹೇಳಿದರು.
ಕೋಲಾರ ತಾಲೂಕಿನ ಬೈರಂಡಹಳ್ಳಿ ಗ್ರಾಮದ ಯುವಕರಿಗೆ ಕ್ರೀಡೆಗೆ ಬೇಕಾದ ಅಗತ್ಯ ವಸ್ತುಗಳು ಮತ್ತು ಆರ್ಥಿಕ ಸಹಾಯವನ್ನು ನೀಡಿ ಮಾತನಾಡಿದ ಅವರು,ಯುವಕರು ಕ್ರೀಡೆಯಲ್ಲಿ ಭಾಗವಹಿಸಿದರೆ ದೈಹಿಕವಾಗಿ ಮಾನಸಿಕವಾಗಿ ಸ್ವದೃಢವಾಗಿ ಇರುತ್ತಾರೆ, ರಾಜ್ಯದ ರಾಹುಲ್ ದ್ರಾವಿಡ್ ಸಾಮಾನ್ಯ ಕುಟುಂಬದಲ್ಲಿ ಜನಿಸಿ ಅವರು ನಮ್ಮ ದೇಶದ ಕ್ರಿಕೆಟ್ ನಾಯಕನಾಗಿ ಇಂದು ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಇನ್ನು ಅನೇಕ ಯುವಕರು ಕ್ರೀಡೆಯಲ್ಲಿ ನಮ್ಮ ದೇಶಕ್ಕಾಗಿ ದುಡಿಯುತ್ತಿದ್ದಾರೆ ಅವರಂತೆ ಕ್ಷೇತ್ರದ ಪ್ರತಿ ಗ್ರಾಮದಲ್ಲಿ ಯುವಕರು ಕ್ರೀಡೆಯಲ್ಲಿ ಪಾಲ್ಗೊಂಡು ನಮ್ಮ ತಾಲೂಕಿಗೆ ಕೀರ್ತಿ ತರಬೇಕು ಎಂದರು.
ಗ್ರಾಮೀಣ ಭಾಗದ ಯುವಕರಿಗೆ ಕ್ರೀಡೆಯಲ್ಲಿ ಭಾಗವಹಿಸಲು ನರೇಂದ್ರ ಮೋದಿಜಿ ಮತ್ತು ಬಸವರಾಜ್ ಬೊಮ್ಮಾಯಿ ಅನೇಕ ಯೋಜನೆಗಳನ್ನು ತಂದಿದ್ದಾರೆ, ಈ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಕ್ರೀಡೆಯಲ್ಲಿ ಭಾಗವಹಿಸಲು ಯುವಕರಿಗೆ ತಿಳಿಸಿದರು. ಮುಂದೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ನಾನು ಸ್ಪಧಿಸುತ್ತಿದ್ದು ನನ್ನನ್ನು ಐವತ್ತು ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಗ್ರಾಮೀಣ ಭಾಗದ ಯುವಕರಿಗೆ ಕ್ರಿಕೆಟ್ ಆಟದ ಮೈದಾನ ಖೋಖೋ ಮೈದಾನ ವಾಲಿಬಾಲ್ ಮೈದಾನಗಳನ್ನು ನಿರ್ಮಿಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಅದನ್ನ ಕಾರ್ಯರೂಪಕ್ಕೆ ತರುತ್ತೇನೆ ಎಂದು ತಿಳಿಸಿದರು.
ಮುಖಂಡರಾದ ಬೆಗ್ಲಿ ಸೂರ್ಯ ಪ್ರಕಾಶ್. ತಾಲೂಕು ಅಧ್ಯಕ್ಷ ಸಿಡಿ ರಾಮಚಂದ್ರಗೌಡ. ಕಟಗಟ್ಟೂರು ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್. ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್. ಬೈರಂಡಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ. ರವಿ. ವೆಂಕಟಪ್ಪ. ಸುರೇಶ್ ಕುಮಾರ್. ಹಾಗೂ ಬೈರಂಡಹಳ್ಳಿ ಯುವಕರು ಭಾಗವಹಿಸಿದ್ದರು.