PLACE YOUR AD HERE AT LOWEST PRICE
ಗ್ರಾಮ ಪಂಚಾಯಿತಿಯಿಂದ ನಿರ್ಮಿಸಿರುವ ಕಟ್ಟಡಗಳು, ಕಲ್ಯಾಣಿ ಮತ್ತು ಡಾ.ಬಿ.ಆರ್.ಅಂಬೇಡ್ಕ್ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮ 23-01-2023ರ ಸೋಮವಾರದಂದು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ, ಸಂಸದರಾದ ಎಸ್.ಮುನಿಸ್ವಾಮಿ, ಸರ್ಕಾರದ ಮುಖ್ಯ ಸಚೇತಕರು ಹಾಗೂ ಶಾಸಕರಾದ ವೈ.ಎ.ನಾರಾಯಣಸ್ವಾಮಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅದ್ಯಕ್ಷರಾದ ಹೆಚ್.ನಾಗೇಶ್, ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹ್ಮದ್, ಗೋವಿಂದರಾಜು, ಚಿದಾನಂದ ಎಂ.ಗೌಡ, ಎಂ.ಎಲ್.ಅನಿಲ್ ಕುಮಾರ್, ಛಲವಾದಿ ನಾರಾಯಣಸ್ವಾಮಿ ಮತ್ತು ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ಎಂ.ಕೆ.ವಾಸುದೇವ್, ಜಿಲ್ಲಾಧಿಕಾರಿ ವೆಂಕಟರಾಜಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಕೇಶ್ ಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಕಮ್ಮಸಂದ್ರ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ದಾಮೋದರ್ ರೆಡ್ಡಿ. PDO ವಸಂತ್ ಕುಮಾರ್. ಸದಸ್ಯರುಗಳಾದ ಸ್ವಾಮಿ ವೆಲ್. ಸುರೇಶ್ ಕುಮಾರ್ ರಾಜಪ್ಪ. ರಮೇಶ್. ನಾಗರಾಜ್. ಶಿವ ಹಾಜರಿದ್ದರು.