• Wed. Apr 24th, 2024

PLACE YOUR AD HERE AT LOWEST PRICE

ಕೆಜಿಎಫ್ ನಗರದ 1ನೇ ಅಡ್ಡ ರಸ್ತೆಯಲ್ಲಿ ನೂತನವಾಗಿ ಜೆಡಿಎಸ್ ಪಕ್ಷದ ತಾಲ್ಲೂಕು ಕಛೇರಿಯನ್ನು ಜೆಡಿಎಸ್ ಘೋಷಿತ ಅಭ್ಯರ್ಥಿ ರಮೇಶ್ ಬಾಬು ಹಾಗೂ ನಗರಸಭೆ ಮಾಜಿ ಅಧ್ಯಕ್ಷ ದಯಾನಂದ್ ಸೇರಿದಂತೆ ಗಣ್ಯರು ಉದ್ಘಾಟನೆ ಮಾಡಿದರು.
ಈ ವೇಳೆ ಜೆಡಿಎಸ್ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ಮಾತನಾಡಿ, ಕೆಜಿಎಫ್ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸುಮಾರು ವರ್ಷಗಳಿಂದ ಕಛೇರಿ ಇಲ್ಲದೆ ತೊಂದರೆಯಾಗಿತ್ತು. ನೂತನವಾಗಿ ಉದ್ಘಾಟನೆ ಮಾಡಿರುವ ಕಛೇರಿಯು ಕಾರ್ಯಕರ್ತರಿಗಾಗಿ ನಿತ್ಯ ತೆರೆದಿರುತ್ತದೆ ಎಂದರು‌.
ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭೇಟಿ ನೀಡಿ ಚರ್ಚಿಸಬಹುದು ಹಾಗೂ ಪಕ್ಷದ ಕಾರ್ಯಕ್ರಮಗಳ ಬಗ್ಗೆ ತಿಳಿದುಕೊಳ್ಳಬಹುದು ಎಂದರು.

ಜೆಡಿಎಸ್ ಪಕ್ಷದ ಪ್ರತಿಯೊಬ್ಬರ ಕನಸು ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯ ಮಂತ್ರಿಯಾಗಬೇಕೆಂಬುವುದು ಕನಸಾಗಿದೆ. ತಮ್ಮ ವ್ಯಾಪ್ತಿಯಲ್ಲಿ ಪಕ್ಷವನ್ನು ಸಂಘಟಿಸಿ ಪಕ್ಷವನ್ನು ಬಲಿಷ್ಠಗೊಳಿಸಬೇಕೆಂದರು.
ನಗರ ಸಭೆ ಮಾಜಿ ಅಧ್ಯಕ್ಷ ದಯಾನಂದ  ಮಾತನಾಡಿ, ಕೆಜಿಏಫ್ ನಗರದ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟಿನಿಂದ ಪಕ್ಷಕ್ಕಾಗಿ ಶ್ರಮಿಸಿದಾಗ ಮಾತ್ರ ಜೆಡಿಎಸ್ ಅಭ್ಯರ್ಥಿಯನ್ನು  ಗೆಲ್ಲಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಜೆಡಿಎಸ್ ಅಭ್ಯರ್ಥಿ ಡಾ.ರಮೇಶ್ ಬಾಬು ಅವರನ್ನು ಕೆಜಿಎಫ್ ನಗರದ ಆಟೋ ಚಾಲಕರು  ಸನ್ಮಾನಿಸಿ ಅಭಿನಂದನೆ
ಸಲ್ಲಿಸಿದರು. ಆಟೋ ಚಾಲಕರಿಗೆ ಜೆಡಿಎಸ್ ಪಕ್ಷದಿಂದ ಸಿಹಿ ವಿತರಿಸಿ  ಜೆಡಿಎಸ್ ಪ್ರಣಾಳಿಕೆಯ ಬಿತ್ತಿ ಪತ್ರಗಳನ್ನು
ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಮನೋಹರ್‌ರೆಡ್ಡಿ, ಮುಖಂಡರಾದ ಗಜೇಂದ್ರ ಮೂರ್ತಿ, ಪ್ರಕಾಶಂ ಮೊದಲಾದವರಿದ್ದರು.

Related Post

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ
ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್

Leave a Reply

Your email address will not be published. Required fields are marked *

You missed

error: Content is protected !!