• Sat. May 18th, 2024

ಗ್ರಾಮಾಂತರ ಪ್ರದೇಶಕ್ಕೆ ಬಸ್ ಒದಗಿಸಿ:ಮುಳಬಾಗಿಲುನಲ್ಲಿ ಎಸ್.ಎಫ್.ಐ ಒತ್ತಾಯ.

PLACE YOUR AD HERE AT LOWEST PRICE

ಮುಳಬಾಗಿಲು ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಿಗೆ ಸೂಕ್ತ ರೀತಿಯಲ್ಲಿ ಬಸ್‌ ಒದಗಿಸಬೇಕೆಂದು ಎಸ್.ಎಫ್.ಐ ಸಂಘಟನೆ ಪದಾಧಿಕಾರಿಗಳು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಓಂ ಶಕ್ತಿ ಮಾಲಧಾರಿಗಳಿಗೆ ಸಾರಿಗೆ ಸಂಸ್ಥೆ ಬಸ್‌ಗಳನ್ನು ನೀಡುವುದನ್ನು ನಿಲ್ಲಿಸಿ ಸಾರ್ವಜನಿಕರು ಮತ್ತು ವಿಧ್ಯಾರ್ಥಿಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲವಾದಲ್ಲಿ ಹೋರಾಟ ಅನಿರ್ದಿಷ್ಟಾವಧಿ ಮುಂದುವರಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಈ ವೇಳೆ ಎಸ್.ಎಫ್.ಐ ರಾಜ್ಯ ಮುಖಂಡ ವಾಸುದೇವರೆಡ್ಡಿ ಮಾತನಾಡಿ, ಬಸ್‌ಗಳ ಕೊರತೆಯಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪರದಾಡುವಂತೆ ಆಗಿದೆ. ಬಸ್‌ಗಳನ್ನು ದೇವಾಲಯಗಳಿಗೆ ಹೋಗುವವರಿಗೆ ನೀಡುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಸಾರಿಗೆ ಡಿಪೊಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ದಲಿತ ಸಂಘರ್ಷ ಸಂಯೋಜಕ ಸಮಿತಿ ಅಧ್ಯಕ್ಷ ಮೆಕಾನಿಕ್ ಶ್ರೀನಿವಾಸ್, ಅಮ್ ಆದ್ಮ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಕೀಲುಹೊಳಲಿ ಸತೀಶ್, ಎಸ್.ಎಫ್.ಐ ಮುಖಂಡ ಪುಣ್ಯಹಳ್ಳಿ ಶಂಕರಪ್ಪ, ಶಿವಪ್ಪ, ಸುರೇಶ್‌ ಇದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!