• Sat. Apr 27th, 2024

ಅರಣ್ಯ ಇಲಾಖೆ ಸಿಬ್ಬಂದಿ ದಾಳಿ-ಓರ್ವನ ಬಂಧನ – ಆಂಧ್ರಕ್ಕೆ ಸಾಗಿಸುತ್ತಿದ್ದ ೧೦೦ ಕೆಜಿ ಶ್ರೀಗಂಧದ ತುಂಡುಗಳ ವಶ

PLACE YOUR AD HERE AT LOWEST PRICE

ಆಂಧ್ರಕ್ಕೆ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನ ಕೋಲಾರ ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದು, ಆರೋಪಿಯಿಂದ ೧೦೦ ಕೆಜಿ ಶ್ರೀಗಂಧ ತುಂಡುಗಳು ಹಾಗೂ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಕೋಲಾರ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ, ಹರಳಕುಂಟೆ ಅರಣ್ಯ ಪ್ರದೇಶದಲ್ಲಿ ಅನುಮಾನಸ್ಪದವಾಗಿ ಹೋಗುತ್ತಿದ್ದ ಕಾರನ್ನು ತಡೆದು, ಪರಿಶೀಲಿಸಿದಾಗ ಇಬ್ಬರು ಆರೋಪಿಗಳು ಅಕ್ರಮವಾಗಿ ಶ್ರೀಗಂಧದ ತುಂಡುಗಳು ಹಾಗೂ ಶ್ರೀಗಂಧದ ತುಂಡುಗಳಿಂದ ಬೇರ್ಪಡಿಸಿದ್ದ ಚೇಗನ್ನು ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಿತು. ಕೂಡಲೇ ಕಾರನ್ನು ಹಾಗೂ ಆರೋಪಿ ಆಂಧ್ರದ ಚಿತ್ತೂರಿನ ಜಿಲ್ಲೆಯ ಕುಪ್ಪಂ ತಾಲೂಕಿನ ಕಂಗುಂಯ ವಿ.ಬಾಲಾಜಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನಿಂದ ಆಂಧ್ರದ ಚಿತ್ತೂರು ಜಿಲ್ಲೆಗೆ ಕಾರಿನಲ್ಲಿ ಶ್ರೀಗಂಧದ ತುಂಡುಗಳು ಹಾಗೂ ಶ್ರೀಗಂಧದ ತುಂಡುಗಳಿಂದ ಬೇರ್ಪಡಿಸಿದ್ದ ಚೇಗನ್ನು ಅಕ್ರಮವಾಗಿ ಕಾರಿನಲ್ಲಿ ಸಾಗಾಣಿಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೋಲಾರ ವಲಯದ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ನೇತೃತ್ವದ ತಂಡ ಬೇತಮಂಗಲ ರಸ್ತೆಯ ಹರಳಕುಂಟೆ ಅರಣ್ಯ ಪ್ರದೇಶದಲ್ಲಿ ಕಾರನ್ನು ತಡೆದು ೧೦೦ ಕೆಜಿಯಷ್ಟು ಶ್ರೀಗಂಧದ ತುಂಡುಗಳು ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದೆ.

ಆರೋಪಿ ಬಾಲಾಜಿಯನ್ನ ವಶಕ್ಕೆ ಪಡೆದು, ಕರ್ನಾಟಕ ಅರಣ್ಯ ಕಾಯ್ದೆ ೧೯೬೩ರ ಸೆಕ್ಷನ್ ೮೪, ೮೬, ೮೭ ಹಾಗೂ ಕರ್ನಾಟಕ ಅರಣ್ಯ ನಿಯಮಗಳು ೧೯೬೯ರ ನಿಯಮ ೧೬೫ರ ಉಲ್ಲಂಘನೆಯ ಅಡಿಯಲ್ಲಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!