PLACE YOUR AD HERE AT LOWEST PRICE
ಒಬ್ಬ ಮನುಷ್ಯ ಹುಟ್ಟಿದಾಗಿನಿಂದ ಸಾಯುವರೆಗೂ ವಿಜ್ಞಾನವನ್ನು ಅವಲಂಬಿಸಿರುತ್ತಾನೆ. ಈಗಿನ ಪೀಳಿಗೆಯ ಮಕ್ಕಳಿಗೆ ವೈಜ್ಞಾನಿಕ ಅಂಶಗಳ ಬೆಳವಣಿಗೆಗೆ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರಯೋಗಗಳು ಅತ್ಯವಶ್ಯಕ ಎಂದು ಕೋಲಾರ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಮೋಹನ್ ಅಭಿಪ್ರಾಯಪಟ್ಟರು.
ಕೋಲಾರ ತಾಲ್ಲೂಕಿನ ವಕ್ಕಲೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕುಪ್ಪಂ ಅಗಸ್ತ್ಯ ಫೌಂಡೇಷನ್ ರವರುಗಳ ವತಿಯಿಂದ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರಯೋಗಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ವಕ್ಕಲೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುರಳಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅಂಶಗಳ ಬೆಳವಣಿಗೆಗೆ ವಿಜ್ಞಾನ ವಸ್ತು ಪ್ರದರ್ಶನಗಳು ಮತ್ತು ಚಟುವಟಿಕೆಗಳು ಸಹಕಾರಿಯಾಗಲಿದೆ ಎಂದರು.
ವಕ್ಕಲೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯ ಎಂ.ಎಸ್.ಮುನೇಗೌಡ ಮಾತನಾಡಿ ಕುಪ್ಪಂನ ಅಗಸ್ತ್ಯ ಫೌಂಡೇಷನ್ ರವರು ಕೋಲಾರ ತಾಲ್ಲೂಕಿನ ಶಾಲೆಗಳಲ್ಲಿ ಎಂಟು ವರ್ಷಗಳಿಂದ ವೈಜ್ಞಾನಿಕ ಬೆಳೆಗೆಗೆ ಇಂತಹ ಚಟುವಟಿಕೆಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಕ್ಕಲೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ರಾಜಪ್ಪ, ಉಪಾಧ್ಯಕ್ಷೆ ಲಕ್ಷಿö್ಮ, ಶಿಕ್ಷಣ ಸಂಯೋಜಕ ಕೆ.ಶ್ರೀನಿವಾಸ್, ಸಿ.ಆರ್.ಪಿ. ಮೀನ, ಡಾ.ಕಾವ್ಯ.ಎಂ, ಆರೋಗ್ಯ ನಿರೀಕ್ಷ ಶ್ರೀನಿವಾಸ್.ಜೆ, ಅಗಸ್ತ್ಯ ಫೌಂಡೇಷನ್ ಸಂಪನ್ಮೂಲ ವ್ಯಕ್ತಿಗಳಾದ ಆನಂದಪ್ಪ, ಹರೀಶ್ಕುಮಾರ್, ಪರಮೇಶ್, ಸುರೇಶ್, ರಜಿನಿ, ಶಿಕ್ಷಕರಾದ ಹರಿನಾಥ್, ರಾಮಲಕ್ಷಿö್ಮ, ರಾಧಮ್ಮ, ವಿಜಯ ಕಾರ್ಲೇಕರ್, ಗೀತಾ.ಟಿ.ಎಲ್ ಮತ್ತು ನೇತ್ರಾವತಿ ಭಾಗವಹಿಸಿದ್ದರು.