ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಪ್ರಪಂಚ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ತಾಲ್ಲೂಕಿನ ಗ್ರಾಮದಲ್ಲಿ ಕಾರ್ಯಕ್ರಮ.
ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಪ್ರತಿ ತಿಂಗಳು ಮೂರನೇ ಶನಿವಾರ ಬೆಸ್ಕಾಂ ಇಲಾಖೆವತಿಯಿಂದ ವಿದ್ಯುತ್ ಅದಾಲತ್ ಹಮ್ಮಿಕೊಳ್ಳುವ ಕಾರ್ಯಕ್ರಮದ ಅಂಗವಾಗಿ ತಾಡಿಗೋಳ್ ಗ್ರಾಮದಲ್ಲಿ ಅದಾಲತ್ ಹಮ್ಮಿಕೊಳ್ಳಲಾಗಿತ್ತು.
ಈ ರೀತಿಯ ಅದಾಲತ್ ಕಾರ್ಯಕ್ರಮಗಳು ಪ್ರತಿ ತಾಲ್ಲೂಕಿನಲ್ಲಿಯೂ ಒಂದು ಗ್ರಾಮವೊಂದನ್ನು ಆಯ್ಕೆ ಮಾಡಿಕೊಂಡು ಕಾರ್ಯಕ್ರಮ ನಡೆಸಲು ಆದೇಶ ಸರ್ಕಾರ ಹೊರಡಿಸಿದ್ದು ಅದರಂತೆ ತಾಲ್ಲೂಕಿನ ತಾಡಿಗೋಲ್ ಗ್ರಾಮದಲ್ಲಿ ಬೆಸ್ಕಾಂ ಇಲಾಖೆವತಿಯಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ತಾಡಿಗೋಲ್ ಹಾಗೂ ಸುತ್ತ ಮುತ್ತಲಿನ ಗ್ರಾಮಗಳ ರೈತರು ಸಾರ್ವಜನಿಕರು ಗ್ರಾಮಗಳಲ್ಲಿ ಹಳೆಯ ಕಂಬಗಳ ಬದಲಾವಣೆ ಸೇರಿ ಹಲವು ಸಮಸ್ಯೆಗಳನ್ನು ಬೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರು.
ನಂತರ ಮಾತನಾಡಿದ AEE ರಾಮತೀರ್ಥ ರೈತರ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಬಗೆ ಹರಿಸುವ ಭರವಸೆ ನೀಡಿ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡೊದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗರಾಜ್, ಮುಖಂಡರಾದ ನಾಗೇಶ್,ವೆಂಕಟೇಶಪ್ಪ ಇತರರು ಹಾಜರಿದ್ದರು.