ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಶೇ.೪೦ ಲಂಚವಿಲ್ಲದೆ ಬಿಜೆಪಿ ಸರಕಾರದಲ್ಲಿ ಯಾವುದೇ ಕೆಲಸ ನಡೆಯಲ್ಲ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಟೀಕಿಸಿದರು.
ಕೋಲಾರದ ಕಾಂಗ್ರೆಸ್ ಪ್ರಜಾದ್ವನಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಆಪರೇಷನ್ ಕಮಲದ ಮೂಲಕ ಅನೈತಿಕ ಮಾರ್ಗದಲ್ಲಿ ಸರಕಾರ ನಡೆಸಿರುವ ಬಿಜೆಪಿ ಸರಕಾರದಲ್ಲಿ ರೈತರ ಪರ ಯಾವುದೇ ಯೋಜನೆ ಇಲ್ಲ, ಜಿಎಸ್ಟಿ ಮೂಲಕ ಬಡವರ ಮೇಲೆ ಬರೆ ಎಳೆದಿದೆ ಎಂದು ದೂರಿದರು.
ನಿರಾಶ್ರಿತರಿಗೆ ಒಂದೇ ಒಂದು ಮನೆ ಕೊಟ್ಟಿಲ್ಲ, ಪ್ರಕೃತಿ ವಿಕೋಪದಲ್ಲಿ ನಷ್ಟಗೊಂಡವರಿಗೆ ಬಿಡಿಗಾಸು ಪರಿಹಾರ ಕೊಟ್ಟಿಲ್ಲ, ಈ ಸರಕಾರದ ಕಾರ್ಯವೈಖರಿಯಿಂದ ಜನ ಬೇಸತ್ತಿದ್ದಾರೆ. ಹಿಂದಿನ ಸಿದ್ದರಾಮಯ್ಯ ಸರಕಾರದ ಜನಪರ ಕಾರ್ಯಗಳನ್ನು ನೋಡಿರುವ ಜನರು ಕಾಂಗ್ರೆಸ್ಗೆ ಬೆಂಬಲವಾಗಿ ನಿಂತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿಸಬೇಕೆಂದು ಕೋರಿದರು.