PLACE YOUR AD HERE AT LOWEST PRICE
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯಿಂದ ಸಹಸ್ತ್ರ ಬಿಲ್ವಾರ್ಚನೆ ಪೂಜಾ ಕಾರ್ಯಕ್ರಮವನ್ನು ನಗರದ ಹೊರವಲಯದ ಟಮಕದ ದೀಪ್ತಿ ಮಹಲ್ನಲ್ಲಿ ಹಮ್ಮಿಕೊಂಡಿದ್ದು, ಯೋಜನೆಯ ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಎಂ.ಶೀನಪ್ಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದು, ಇಂದು ನಮ್ಮ ಸಂಘದ ಸದಸ್ಯರಿಗೆ ಸಾಮೂಹಿಕ ಸಹಸ್ತ್ರ ಬಿಲ್ವಾರ್ಚನೆ ಕಾರ್ಯಕ್ರಮವನ್ನು ನಡೆಸಿರುವುದು ತುಂಬ ಸಂತಸದ ವಿಚಾರವಾಗಿದೆ ಎಂದು ತಿಳಿಸಿದರು.
ಹಾಲಿನ ಡೈರಿ ಸಮುದಾಯ ಭವನಕ್ಕೆ ಅನುದಾನ ವಿತರಣೆ, ವೃದ್ಧರಿಗೆ ಮಾಶಾಸನ ವಿತರಣೆ , ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಕಲಚೇತನರಿಗೆ ಸಲಕರಣೆ ವಿತರಣೆ, ವೃತ್ತಿಪರ ಕೋರ್ಸ್ಗಳಿಗೆ ಸುಜ್ಞಾನ ನಿಽ ಶಿಷ್ಯವೇತನ, ಸಂಘದ ಸದಸ್ಯರಿಗೆ ಆರೋಗ್ಯ ವಿಮೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಮಾಡಿ ಮಹಿಳೆಯರನ್ನು ಸಬಲೀಕರಣ ಮಾಡಿ ಒಂದು ಉತ್ಕೃಷ್ಟದ ಸಮಾಜ ನಿರ್ಮಾಣಕ್ಕೆ ನಮ್ಮ ಸಂಸ್ಥೆ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಕೋಲಾರ ನಗರಸಭೆ ಅಧ್ಯಕ್ಷೆ ಶ್ವೇತಾ ಶಬರೇಶ್, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ವೆಂಕಟೇಶ್, ಮಾಜಿ ಎಪಿಎಂಸಿ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ, ಜಿಲ್ಲಾ ನಿರ್ದೇಶಕ ಕೆ.ಮುರಳಿಧರ ಶೆಟ್ಟಿ, ಕೋಲಾರ ನಗರಾಭಿವೃದ್ದಿ ಪ್ರಾಽಕಾರದ ಅಧ್ಯಕ್ಷ ವಿಜಯ್ ಕುಮಾರ್, ತಾಲೂಕು ಯೋಜನಾಽಕಾರಿ ಟಿ.ಎಸ್.ಸಿದ್ದಗಂಗಯ್ಯ, ವಲಯದ ಒಕ್ಕೂಟ ಪದಾಽಕಾರಿಗಳು ಸ್ವ-ಸಹಾಯ ಪ್ರಗತಿಬಂಧು ಸಂಘದ ಸದಸ್ಯರು ವಲಯ ಮೇಲ್ವಿಚಾರಕರು ಅಕ್ಕಮಹಾದೇವಿ ಯೋಜನೆಯ ಸಿಬ್ಬಂದಿಗಳು, ಸೇವಾಪ್ರತಿನಿಽಗಳು ಉಪಸ್ಥಿತರಿದ್ದರು.