PLACE YOUR AD HERE AT LOWEST PRICE
74 ನೇ ಗಣರಾಜ್ಯೋತ್ಸವ ನಿಮಿತ್ತ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನವ ಕರ್ನಾಟಕ ಸ್ವಾಭಿಮಾನ ವೇದಿಕೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಆರಕ್ಷಕ ವೃತ್ತ ನಿರೀಕ್ಷಕರಾದ ನಾರಾಯಣಸ್ವಾಮಿ ರವರು ಮಾತನಾಡಿ 74ನೇ ಗಣರಾಜ್ಯೋತ್ಸವ ಶುಭಾಶಯಗಳನ್ನು ಕೋರಿ ಕನ್ನಡ ಪರ ಸಂಘಟನೆ ಯಿಂದ ಉತ್ತಮ ಕಾರ್ಯವಾಗುತ್ತಿದೆ ಎಂದರು.
ಸಂಘಟನೆಯಿಂದ ಸಮಾಜ ಮುಖಿ ಕೆಲಸಗಳು ಹಾಗೂ ವಿದ್ಯಾರ್ಥಿಗಳಿಗೆ ಸ್ಫೂರ್ತಿ ದಾಯಕ ಕೆಲಸ ಮಾಡುತ್ತಿರುವುದು ಸಂತೋಷದಾಯಕ ವಿಷಯ. ಸಂಘಟನೆ ಮುಂದಿನ ದಿನಗಳಲ್ಲಿ ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಪ್ರದಾನ ಕಾರ್ಯದರ್ಶಿ ಶಬ್ಬೀರ್, ತಾಲ್ಲೂಕು ಅಧ್ಯಕ್ಷರು ರಾಜು ಜಿ ಎಸ್, ಕಾರ್ಯದರ್ಶಿ ಕುಮಾರ್, ಉಪಾಧ್ಯಕ್ಷ ನರೇಶ್, ಶಿವಪ್ಪ, ಶಬ್ಬೀರ್, ಜಿ ಎಂ ಕೃಷ್ಣಪ್ಪ ಇತರರು ಹಾಜರಿದ್ದರು