PLACE YOUR AD HERE AT LOWEST PRICE
ಕುಮಾರಸ್ವಾಮಿ ಆಹ್ವಾನದ ಮೇರೆಗೆ ಹಾಗೂ ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಹೆಚ್. ಗೊಲ್ಲಹಳ್ಳಿ ಗ್ರಾಪಂ ಅಧ್ಯಕ್ಷ ಜಗದೀಶ್ ತಿಳಿಸಿದರು.
ಮುಳಬಾಗಿಲು ನಗರದ ಕೋಚಿಮುಲ್ ಶಿಬಿರದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಜಗದೀಶ್ ರವರು ಕಳೆದ ಎರಡು ದಿನಗಳ ಹಿಂದೆ ಮುಳುಬಾಗಿಲು ಟೌನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ.
ನಾನು ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದು ಕಳೆದ ಎರಡು ವರ್ಷದ ಹಿಂದೆ ಮುಳಬಾಗಿಲು ಟೌನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಆಯ್ಕೆಯಾಗಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೆ.
ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ನನಗೆ ಯಾವುದೇ ಮನ್ನಣೆ ಸ್ಪಂದನೆ ಇಲ್ಲದ ಕಾರಣ, ನಾನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಿದ್ದೇನೆ ಎಂದು ಹೇಳಿದರು.
ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ , ಶರತ್ತುಗಳು ಇಲ್ಲದೆ ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ಜೆಡಿಎಸ್ ಪಕ್ಷವನ್ನು ಸೇರಿಕೋಂಡಿದ್ದೇನೆ ಎಂದ ಅವರು ಪಕ್ಷ ಸಂಘಟನೆ ಮಾಡಿ ರಾಜ್ಯದಲ್ಲಿ ಕುಮಾರಸ್ವಾಮಿ ಕೈ ಬಲಪಡಿಸುತ್ತೇನೆ ಎಂದರು.
ತಾಲೂಕಿನಲ್ಲಿ ಸಮೃದ್ಧಿ ಮಂಜಣ್ಣರನ್ನು ಅಧಿಕಾರಕ್ಕೆ ತರಲು ಶಕ್ತಿಮೀರಿ ಪಕ್ಷ ಸಂಘಟನೆ ಮಾಡಿ ಕೆಲಸ ಮಾಡುತ್ತೇನೆ. ನಮ್ಮ ಬಳಗ, ಮುಖಂಡರು, ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಪುಟ್ಟೇಗೌಡ, ರಮೇಶ್, ಕಿರಣ್ ,ಕಲಿಕೆರೆ ಅಮರಪ್ಪ, ಮಂಜುನಾಥ್, ಜೆಡಿಎಸ್ ಹಿರಿಯ ಮುಖಂಡರಾದ ಪೆದ್ದೂರು ವರದಪ್ಪ, ಕೆ. ಪಿ ಟ್ರಾವೆಲ್ಸ್ ಮಾಲೀಕರಾದ ಗೊಲ್ಲಹಳ್ಳಿ ಪ್ರಭಾಕರ್, ರೆಸಾರ್ಟ್ ಚಂದ್ರಹಾಸ್, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.