• Sun. Apr 28th, 2024

ಕಮ್ಮಸಂದ್ರ ಗ್ರಾಪಂ ಅಧ್ಯಕ್ಷ ಸುರೇಶ್‍ರಿಂದ  ಯರನಾಗನಹಳ್ಳಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ.

PLACE YOUR AD HERE AT LOWEST PRICE

ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಜ. 29ವರೆಗೂ ಹಮ್ಮಿಕೊಂಡಿದ್ದು, ಬಿಜೆಪಿ ಮುಖಂಡ ಗ್ರಾಪಂ ಅಧ್ಯಕ್ಷ ಸುರೇಶ್ ನೇತೃತ್ವದಲ್ಲಿ ಸುಂದರಪಾಳ್ಯ, ಕಮ್ಮಸಂದ್ರ ಗ್ರಾಪಂಯ ಗ್ರಾಮಗಳಲ್ಲಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಜನಪರ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರಿಗೂ ತಿಳಿಸಲು ಮನೆ-ಮನೆಗೂ ಬೇಟಿ ನೀಡಿ ಕರ ಪತ್ರ ಹಂಚಿ ಮನೆಯ ಮೇಲೆ ಸ್ಟಿಕ್ಕರಿಂಗ್‍ಗಳನ್ನು ಅಂಟಿಸಲಾಗುತ್ತಿದೆ ಎಂದರು.

ಸಾರ್ವಜನಿಕರು ಉತ್ತಮ ಸ್ಪಂದನೆ ನೀಡುತ್ತಿದ್ದು, ಈ ಬಾರಿ ಕೆಜಿಎಫ್‍ನಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಸುರೇಶ್, ನವೀಣ್,ಸ್ವಾಮಿವೇಲ್, ಮಧು, ರಮೇಶ್, ಗ್ರಾಮದ ಮುಖಂಡರಾದ ಶಿವಾರೆಡ್ಡಿ, ಮಂಜುನಾಥ್, ಸುಭ್ರಮಣಿ, ಸಂಪಂಗಿ, ಗಣೇಶ್, ಕಿರಣ್ ಹಾಗೂ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!