• Mon. Sep 16th, 2024

PLACE YOUR AD HERE AT LOWEST PRICE

ಕೋಲಾರ ಚಿನ್ನದ ಗಣಿ ಪ್ರದೇಶದ(ಕೆಜಿಎಫ್) ಚಾಂಫೀಯನ್‍ರೀಫ್ಸ್‍ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಹುತಾತ್ಮರ ಸ್ಮರಣಾರ್ಥವಾಗಿ ಮೌನ ಆಚರಿಸುವ ಮೂಲಕ ಅರ್ಥಪೂರ್ಣವಾಗಿ
ಹುತಾತ್ಮರ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಎಸ್.ಪಿ. ಡಾ|| ಕೆ.ಧರಣೀದೇವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹುತಾತ್ಮರ ದಿನಾಚರಣೆಯ ಕಾರ್ಯಕ್ರಮದಲ್ಲಿ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ
 ಜಿಲ್ಲಾ ಪೊಲೀಸ್ ಕಛೇರಿಯ ಎಲ್ಲಾ ಕೆಲಸ ಕಾರ್ಯಗಳನ್ನು  ಸ್ಥಗಿತಗೊಳಿಸಿ ಎರಡು ನಿಮಿಷ ಮೌನ  ಆಚರಿಸಲಾಯಿತು.
ಮೌನಾಚರಣೆಗೂ ಮುನ್ನ ಎಸ್.ಪಿ. ಡಾ|| ಕೆ.ಧರಣೀದೇವಿ ಅವರು ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದವರ
ಗುಣಗಾನ ಮಾಡಿದರು.
ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಡಿವೈಎಸ್ಪಿ ವಿ.ಎಲ್.ರಮೇಶ್, ಶಾಖಾಧೀಕ್ಷಕ ಎಂ.ಮೂರ್ತಿ, ಎ.ನಜೀಮಾಬಾನು, ಪೊಲೀಸ್ ಇನ್ಸ್‍ಪೆಕ್ಟರ್ ಆರ್.ದಯಾನಂದ, ಪಿಎಸ್‍ಐ ನಾಗಪ್ಪ ಖಾನಾಪೂರ, ಎಎಸ್‍ಐ ಕೆ.ವಾಸುದೇವಸಿಂಗ್, ಮಧುಸೂಧನ, ಸುರೇಶ್‍ಬಾಬು, ವಿ.ಸೋಮಶೇಖರ, ಕೃಷ್ಣಪ್ಪ ಹಾಗೂ ಲಿಪಿಕ ಸಿಬ್ಬಂದಿಗಳು ಸೇರಿದಂತೆ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You missed

error: Content is protected !!