• Mon. May 20th, 2024

ಮುಳಬಾಗಿಲು ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಹುತಾತ್ಮರ ದಿನಾಚರಣೆ.

PLACE YOUR AD HERE AT LOWEST PRICE

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಕೆ.ವಿ. ವೆಂಕಟರೆಡ್ಡಿ  ಮಾತನಾಡಿ ಗಾಂಧಿಜಿ ನಮ್ಮ ಹೆಮ್ಮೆ, ನಮ್ಮ ಗಾಂಧಿ. ಸತ್ಯಾಗ್ರಹ ಎಂಬ ಚಳುವಳಿಯನ್ನು ವಿಶ್ವಕ್ಕೆ ಬಳುವಳಿಯಾಗಿ ನೀಡಿದವರು.
ಶಾಂತಿ ಮತ್ತು ಅಹಿಂಸಾ ಮಾರ್ಗದ ಹೋರಾಟವನ್ನು ವಿಶ್ವಕ್ಕೆ ಪರಿಚಯಿಸಿದ ಸ್ವಾತಂತ್ರ್ಯಕ್ಕಾಗಿ ಇಡೀ ದೇಶವನ್ನು ಒಗ್ಗೂಡಿಸಿ ರಾಮ ರಾಜ್ಯದ ಕನಸು ಕಂಡ ರಾಷ್ಟ್ರಪಿತರಾದ ನಮ್ಮ ಮಹಾತ್ಮಗಾಂಧಿಯರು ಹುತಾತ್ಮರಾದ ದಿನ ಇಂದು.
ನಾವೆಲ್ಲರೂ ಅವರ ಸರಳ ಜೀವನ ಹಾಗೂ ಉನ್ನತ ಆದರ್ಶಗಳನ್ನು ಅಳವಡಿಸಿಕೊಳ್ಳೋಣ, ಸದಾ ಅವರ ಚಿಂತನೆಗಳನ್ನು ಸ್ಮರಿಸೋಣ ಎಂದು ತಿಳಿಸಿದರು.
ಸರ್ಕಾರಿ ಪಾಲಿಟೆಕ್ನಿಕ್ ಕಾಜೇಜಿನ ರಿಜಿಸ್ಟ್ರಾರ್ ಎಂ.ನಾಗವೇಣಿ ಮಾತನಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ಮಾತ್ರವಲ್ಲ, ಸ್ವಾತಂತ್ರ್ಯ ಬಂದ ನಂತರವೂ ಹಲವಾರು ಯೋಧರು ನಮ್ಮ ದೇಶದ ರಕ್ಷ ಣೆಗಾಗಿ ಬಲಿದಾನ ಕೊಟ್ಟಿದ್ದಾರೆ.
ಇವರನ್ನು ಸ್ಮರಿಸಲು ಕೂಡಾ ಒಂದು ದಿನವಿದೆ. ಅದುವೇ ಜನವರಿ 30. ಈ ದಿನವನ್ನು ಭಾರತದಲ್ಲಿ ಹುತಾತ್ಮರ ದಿನ ಅಥವಾ ಸರ್ವೋದಯ ದಿನವೆಂದು ಆಚರಿಸಲಾಗುತ್ತದೆ. ಈ ದಿನವಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ ಯೋಧರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲಾಗುತ್ತದೆ.
ಮೂಲತಃ ಈ ದಿನ ಭಾರತದ ಪಿತಾಮಹ ಮಹಾತ್ಮಾ ಗಾಂಧೀಜಿ ಅವರು ನಾಥುರಾಮ್ ಗೋಡ್ಸೆ ಅವರಿಂದ ಹತರಾದ
ದಿನವೂ ಹೌದು ಎಂದರು.
ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೌನ ಆಚರಿಸಿದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಳಬಾಗಿಲು ಶಾಖೆಯ ಉಪಾಧ್ಯಕ್ಷ ಎನ್.ಮುನಿರಾಜು, ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!