• Sat. May 11th, 2024

ಎನ್.ಡಿ.ಎ. ಮೈತ್ರಿಪಕ್ಷ ಆರ್.ಪಿ.ಐ.ನಿಂದ ಬಿಜೆಪಿಗೆ ಬೆಳವಣಿಗೆಗೆ ಅನುಕೂಲ : ಸಿ.ಎಂ. ಅಶೋಕ್

PLACE YOUR AD HERE AT LOWEST PRICE

ಕೋಲಾರ ಜಿಲ್ಲೆಯ ಹೋರಾಟಗಾರ, ಡಾ. ಎಂ.ವೆ0ಕಟಸ್ವಾಮಿ, ಆರ್.ಪಿ.ಐ. ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವುದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಹಾಗೂ ಆರ್.ಪಿ.ಐ ಒಗ್ಗಟ್ಟಿನಿಂದ ಕೆಲಸ ಮಾಡಲಿದೆ ಎಂದು ಬಿಜೆಪಿ ಪಕ್ಷದ ತಾಲ್ಲೂಕು ಉಪಾಧ್ಯಕ್ಷ ಸಿ.ಎಂ. ಅಶೋಕ್ ತಿಳಿಸಿದರು.

ಸೋಮವಾರ ನಗರದ ಹಳೆಯ ಬಸ್ ನಿಲ್ದಾಣದಲ್ಲಿ ನಡೆದ ಆರ್.ಪಿ.ಐ. ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಂ.ವೆ0ಕಟಸ್ವಾಮಿ ಅಭಿನಂದನಾ ಕಾರ್ಯಕ್ರಮದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದರು.

ಭಾರತೀಯ ರಿಪಬ್ಲಿಕ್ ಪಾರ್ಟಿ ಈಗಾಗಲೇ ಎನ್.ಡಿ.ಎ. ಮೈತ್ರಿಕೂಟದ ಸದಸ್ಯ ಪಕ್ಷವಾಗಿದ್ದು, ಕೇಂದ್ರ ಸಚಿವ ಸಂಪುಟದಲ್ಲಿ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಮ್‌ದಾಸ್ ಅಠಾವಳೆ ಸಾಮಾಜಿ ಕಲ್ಯಾಣ ಸಚಿವರಾಗಿದ್ದಾರೆ.

ಬಿಜೆಪಿ ಮೈತ್ರಿಕೂಟದ ಸದಸ್ಯ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ವೆಂಕಟಸ್ವಾಮಿ ಕೋಲಾರ ಮೂಲದವರಾಗಿರುವುದು ಕೋಲಾರ ಜಿಲ್ಲೆಯಲ್ಲಿ ಉಭಯ ಪಕ್ಷಗಳ ಮೈತ್ರಿಗೆ ಅನುಕೂಲವಾಗಿದೆ ಎಂದರು.

ಜಿಲ್ಲೆಯಲ್ಲಿ ಬಿಜೆಪಿ ತನ್ನ ಶಕ್ತಿಯನ್ನು ತಳಮಟ್ಟದಲ್ಲಿ ಬೇರೂರಲು ಈಗಾಗಲೇ ಗ್ರಾಮ ಶಾಖೆಗಳ ಶಕ್ತಿ ಕೇಂದ್ರಗಳನ್ನು ಆರಂಭಿಸಿರುವ ಸಂದರ್ಭದಲ್ಲಿ ಆರ್.ಪಿ.ಐ. ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರು ಜಿಲ್ಲೆಯವರಾಗಿದ್ದು, ಕೋಲಾರ ಜಿಲ್ಲೆಯಲ್ಲಿ ಮೈತ್ರಿಕೂಟದ ಕೆಲಸ ಇನ್ನಷ್ಟು ಶಕ್ತಿಯುತವಾಗಿ ಬೆಳೆಯುವ ಮೂಲಕ ಮುಂಬರುವ ಚುನಾವಣೆಗಳನ್ನು ಎದುರಿಸಲು ಶೋಷಿತ ಸಮುದಾಯಗಳ ಬೆಂಬಲ ಯತೇಚ್ಚವಾಗಿ ಲಭಿಸಲಿದೆ ಎಂದು ಸಿ.ಎಂ.ಅಶೋಕ್ ತಿಳಿಸಿದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!