• Fri. Apr 26th, 2024

PLACE YOUR AD HERE AT LOWEST PRICE

ನಿವೃತ್ತ ಪೊಲೀಸ್ ಅಧಿಕಾರಿಗೆ ಹಾರ್ಥಿಕ ಬಿಳ್ಕೋಡುಗೆ ಕಾರ್ಯಕ್ರಮವು ಕೆಜಿಎಫ್ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ನಡೆಯಿತು.
ಆಂಡ್ರಸನ್‍ಪೇಟೆ ಪೊಲೀಸ್ ಠಾಣೆಯ ಎಎಸ್‍ಐ ಮ್ಯಾಥ್ಯೂ ಅಲೆಗ್ಸಾಂಡರ್ ಅವರು 30 ವರ್ಷಗಳ ಸೇವೆಯನ್ನು ಸಲ್ಲಿಸಿ, ಜ.31 ರಂದು ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿ ಹೊಂದಿದರು.
ಈ ಸಂದರ್ಭದಲ್ಲಿ ಅವರಿಗೆ ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಏರ್ಪಡಿಸಿದ್ದ, ಹಾರ್ಥಿಕ ಬಿಳ್ಕೋಡುಗೆ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ.ಧರಣೀದೇವಿ ಅವರು ಅಧ್ಯಕ್ಷತೆ ವಹಿಸಿ ನಿವೃತ್ತ ಪೊಲೀಸ್ ಅಧಿಕಾರಿಗೆ ವಿಶ್ರಾಂತಿ ಜೀವನಕ್ಕೆ ಶುಭ ಕೋರಿದರು.
ನಿವೃತ್ತರಾದ ಎಎಸ್‍ಐ ಮ್ಯಾಥ್ಯೂ ಅಲೆಗ್ಸಾಂಡರ್ ಅವರನ್ನು ಶಾಲು ಹೊದಿಸಿ, ಹಣ್ಣು ಹಂಪಲು ನೀಡಿ ಸನ್ಮಾನಿಸಿ, ಸೇವಾ ಪ್ರಮಾಣಪತ್ರ, ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಡಿವೈಎಸ್ಪಿ ವಿ.ಎಲ್.ರಮೇಶ್, ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಜಿಲ್ಲೆಯ ಇನ್ಸ್‍ಪೆಕ್ಟರ್‍ಗಳು, ಪಿಎಸ್‍ಐಗಳು ಉಪಸ್ಥಿತರಿದ್ದರು.
ಸರ್ಕಲ್ ಇನ್ಸ್‍ಪೆಕ್ಟರ್ ಕುಮಾರಸ್ವಾಮಿ ಅವರಿಂದ ಸ್ವಾಗತ, ಪಿಎಸ್‍ಐ ಸುನಿಲ್‍ಕುಮಾರ್ ಅವರಿಂದ ವರದಿ ವಾಚನ, ವಿ.ಮಂಜುನಾಥ ಅವರಿಂದ ನಿರೂಪಣೆ, ಎಎಸ್‍ಐ ದಿವಾಕರನಾಯ್ಡು ಅವರಿಂದ ವಂದನೆಗಳಾದವು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!