• Thu. Apr 25th, 2024

ಕೋಲಾರ I ಅಂತರ ಕಾಲೇಜು ವಾಲಿಬಾಲ್ ಟೂರ್ನಿಯಲ್ಲಿ ಬಸವಶ್ರೀ ಕಾನೂನು ಕಾಲೇಜಿಗೆ ದ್ವಿತೀಯ ಸ್ಥಾನ 

PLACE YOUR AD HERE AT LOWEST PRICE

ದಾವಣಗೆರೆ ಜಿಲ್ಲೆಯಲ್ಲಿ ನಡೆದ ರಾಜ್ಯ ಕಾನೂನು ವಿವಿ ವ್ಯಾಪ್ತಿಯ ಅಂತರ ಕಾಲೇಜು ವಾಲಿಬಾಲ್ ಟೂರ್ನಿಯಲ್ಲಿ ಕೋಲಾರದ ಬಸವಶ್ರೀ ಕಾನೂನು ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡರು.

ಬೆಂಗಳೂರಿನ ಅಲ್ ಅಮೀನ್ ಕಾಲೇಜು ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನದ ನಡುವೆಯು ಕೋಲಾರ ಬಸವಶ್ರೀ ಕಾನೂನು ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಮುಡಿಗೇರಿಸಿಕೊಂಡರು.

ಬಸವಶ್ರೀ ಕಾನೂನು ಕಾಲೇಜಿನ ಕೆ.ಎ.ಹರೀಶ್ ಬೆಸ್ಟ್ ಆಲ್‌ರೌಂಡರ್ ಪ್ರಶಸ್ತಿಗೆ ಭಾಜನರಾದರು. ಬಸವಶ್ರೀ ಕಾನೂನು ಕಾಲೇಜು ಕಾರ್ಯದರ್ಶಿ ಒಡೆಯರ್ ಸೇರಿದಂತೆ ತಂಡದ ಆಟಗಾರರಾದ ಮದನ್, ಹರೀಶ್, ಸತೀಶ್, ಕಿರಣ್, ಕಿಶೋರ್, ಅರ್ಜುನ್, ಉದಯಕಿರಣ್, ಮಹೇಶ್, ನಾಗ, ಗಣೇಶ್, ಲೋಕೇಶ್, ದಿಲೀಪ್, ರೋಹಿತ್ ಉಪಸ್ಥಿತರಿದ್ದರು.

ಕ್ರೀಡಾಪಟುಗಳನ್ನು ಕಾಲೇಜಿನ ವತಿಯಿಂದ ಅಭಿನಂದಿಸಿದ್ದಾರೆ.

ಸುದ್ದಿ ಓದಿ ಹಂಚಿ:

Related Post

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ
ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್

Leave a Reply

Your email address will not be published. Required fields are marked *

You missed

error: Content is protected !!