• Fri. Apr 26th, 2024

PLACE YOUR AD HERE AT LOWEST PRICE

ಶಾಸಕಿ ಡಾ ರೂಪಕಲಾ ಎಂ ಶಶಿಧರ್ ರ ಸಾರಥ್ಯದಲ್ಲಿ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯತಿಯ ಹಲವು ಪ್ರಮುಖ ಮುಖಂಡರು ಹಾಗೂ ಸದಸ್ಯರು ಬಿ.ಜೆ.ಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಸೇರ್ಪಡೆಯಾದ ಪ್ರಮುಖರೆಂದರೆ  ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು  ಹಾಗೂ ಹಾಲಿ ಸದಸ್ಯರಾದ ಟಿ.ಗೊಲ್ಲಹಳ್ಳಿಯ ಚೌಡಪ್ಪ , ಗ್ರಾಮ ಪಂಚಾಯತಿ ಸದಸ್ಯರಾದ  ಮುನಿವೆಂಕಟಪ್ಪ ತಿಮ್ಮಸಂದ್ರ, ವೆಂಕಟರಾಮ್ , ಮುಖಂಡರಾದ  ನಾಗಪ್ಪ, ಕೃಷ್ಣಪ್ಪ ಮತ್ತು ಮದ್ದಿನಾಯಕನಹಳ್ಳಿ ಗ್ರಾಮದ ಗವರ್ನಮೆಂಟ್ ನಾರಾಯಣಸ್ವಾಮಿ.

ಸೇರ್ಪಡೆಗೊಂಡ ಮುಖಂಡರು ಮತನಾಡಿ ಶಾಸಕಿ ರೂಪಕಲಾ ಎಂ ಶಶಿಧರ್ ತಮ್ಮ ಅಧಿಕಾರಾವಧಿಯಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ನಮ್ಮ ಇಡೀ ಪಂಚಾಯತಿ ಹಾಗೂ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಪಥದಲ್ಲಿ ಸಾಗಬೇಕಾಗಿದ್ದು ಶಾಸಕರ ಕೈ ಬಲಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿರುವುದಾಗಿ ತಿಳಿಸಿದರು.

ಶಾಸಕರು ಮಾತನಾಡಿ ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರಿಗೆ ಸ್ವಾಗತ ಕೋರಿ‌ ಧನ್ಯವಾದಗಳನ್ನು ತಿಳಿಸಿದರು. ಹಾಗೆಯೇ ಪಕ್ಷವನ್ನು ಬಲಪಡಿಸಲು ಶ್ರಮಿಸಿದ ಎಲ್ಲಾ ಸ್ಥಳೀಯ ಮುಖಂಡರಿಗೆ ಧನ್ಯವಾದಗಳನ್ನು ತಿಳಿಸಿದರು.

ಕಾಂಗ್ರೆಸ್ ಪಕ್ಷ ಸಾಗರವಿದ್ದಂತೆ ಅದರ ಶಕ್ತಿ ಅಗಾದ,‌ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಪಕ್ಚ ಇನ್ನಷ್ಟು ಬಲಿಷ್ಟವಾಗಲಿದೆ ಅದಕ್ಕೆ ನಿದರ್ಶನ ಇವತ್ತಿನ ಕಾರ್ಯಕ್ರಮವೇ ಸಾಕ್ಷಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!