ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಬಂಗಾರಪೇಟೆ ಕನ್ನಡ ಸಂಘದ ವತಿಯಿಂದ 104 ನೇ ತಿಂಗಳ ಶ್ರೀ ಭುವನೇಶ್ವರಿ ತಾಯಿ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಟ್ಟಣದ ಕುವೆಂಪು ವೃತ್ತದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ತಿಂಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ವಾಡಿಕೆಯಂತೆ ಇತ್ತೀಚಿಗೆ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಗೊಡಿರುವ ಕುಮಾರಿ ಗಾಯಿತ್ರಿ, ದೆಹಲಿಯ ಸಂಸತ್ ಭವನದಲ್ಲಿ ಮಾತನಾಡಿ ಹೆಗ್ಗಳಿಕೆ ಪಾತ್ರರಾಗಿರುವ ಕುಮಾರಿ ಎಂ.ಸ್ಫೂರ್ತಿ ಮತ್ತು ಕುಮಾರಿ ಎಂ.ಎನ್.ಅರ್ಚನರವರುಗಳನ್ನು ಗೌರವಪೂರ್ವಕವಾಗಿ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಟಾಧಿಕಾರಿಗಳಾದ ಡಾ.ಧರಣಿ ದೇವಿ, ತಹಸೀಲ್ದಾರ್ ಎಂ. ದಯಾನಂದ, ಕನ್ನಡ ಸಂಘದ ಅಧ್ಯಕ್ಷರಾದ ಪಲ್ಲವಿ ಮಣಿ ಹಾಗೂ ಹಲವು ಪ್ರಮುಖರು ವೇದಿಕೆಯಲ್ಲಿ ಹಾಜರಿದ್ದರು.
ಎಸ್.ಡಿ.ಸಿ ಕಾಲೇಜಿನ ವಿದ್ಯಾರ್ಥಿಗಳಿಂದ, ಮಾರ್ಸ್ ಡಿಜಿಟಲ್ ಗ್ಲೋಬಲ್ ಸ್ಕೂಲ್ ಹಾಗೂ ಸ್ಥಳೀಯ ಕಲಾವಿದರಾದ ಕರ್ನಾಟಕ ಡ್ಯಾನ್ಸ್ ಇನ್ಸ್ಟ್ಯೂಟ್, ಶೈನಿಂಗ್ ಸ್ಟಾರ್ ಅಕಾಡಮಿ ತಂಡದವರಿಂದ ಅದ್ಭುತ ನೃತ್ಯ ಪ್ರದರ್ಶನ ನೋಡುಗರನ್ನು ಆಕರ್ಷಣೆ ಮಾಡಿದವು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಜರಿದ್ದರು.