• Sun. May 5th, 2024

PLACE YOUR AD HERE AT LOWEST PRICE

ಬಂಗಾರಪೇಟೆ ಕನ್ನಡ ಸಂಘದ ವತಿಯಿಂದ 104 ನೇ ತಿಂಗಳ ಶ್ರೀ ಭುವನೇಶ್ವರಿ ತಾಯಿ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಟ್ಟಣದ ಕುವೆಂಪು ವೃತ್ತದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ತಿಂಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ವಾಡಿಕೆಯಂತೆ ಇತ್ತೀಚಿಗೆ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಗೊಡಿರುವ ಕುಮಾರಿ ಗಾಯಿತ್ರಿ, ದೆಹಲಿಯ ಸಂಸತ್ ಭವನದಲ್ಲಿ ಮಾತನಾಡಿ ಹೆಗ್ಗಳಿಕೆ ಪಾತ್ರರಾಗಿರುವ  ಕುಮಾರಿ ಎಂ.ಸ್ಫೂರ್ತಿ ಮತ್ತು ಕುಮಾರಿ ಎಂ.ಎನ್.ಅರ್ಚನರವರುಗಳನ್ನು  ಗೌರವಪೂರ್ವಕವಾಗಿ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಟಾಧಿಕಾರಿಗಳಾದ ಡಾ.ಧರಣಿ ದೇವಿ, ತಹಸೀಲ್ದಾರ್ ಎಂ. ದಯಾನಂದ, ಕನ್ನಡ ಸಂಘದ ಅಧ್ಯಕ್ಷರಾದ ಪಲ್ಲವಿ ಮಣಿ ಹಾಗೂ ಹಲವು ಪ್ರಮುಖರು ವೇದಿಕೆಯಲ್ಲಿ ಹಾಜರಿದ್ದರು.
ಎಸ್.ಡಿ.ಸಿ ಕಾಲೇಜಿನ ವಿದ್ಯಾರ್ಥಿಗಳಿಂದ, ಮಾರ್ಸ್ ಡಿಜಿಟಲ್ ಗ್ಲೋಬಲ್ ಸ್ಕೂಲ್ ಹಾಗೂ ಸ್ಥಳೀಯ ಕಲಾವಿದರಾದ ಕರ್ನಾಟಕ ಡ್ಯಾನ್ಸ್ ಇನ್ಸ್‌ಟ್ಯೂಟ್, ಶೈನಿಂಗ್ ಸ್ಟಾರ್ ಅಕಾಡಮಿ ತಂಡದವರಿಂದ ಅದ್ಭುತ ನೃತ್ಯ ಪ್ರದರ್ಶನ ನೋಡುಗರನ್ನು ಆಕರ್ಷಣೆ ಮಾಡಿದವು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಜರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!