PLACE YOUR AD HERE AT LOWEST PRICE
ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ದಿನೇ ದಿನೇ ರಾಜಕೀಯ ಕಾವು ರಂಗೇರುತ್ತಿದ್ದು ಪಕ್ಷಾಂತರ ಪರ್ವವೂ ಸಹ ಬಹಳ ಜೋರಾಗಿಯೇ ನಡೆಯುತ್ತಿದೆ.
ಬಹಳಷ್ಟು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ಪಕ್ಷಾಂತರ ಪರ್ವ ಮಾಡಿದಂತಹ ಸಮಯದಲ್ಲಿ ಅಭ್ಯರ್ಥಿಗಳೇ ಹೋಗಿ ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದು ಸಹಜ ಪ್ರಕ್ರಿಯೆಯಾಗಿದೆ.
ಆದರೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ಜೆಡಿಎಸ್ ಪಕ್ಷದ ಕಾರ್ಯಕರ್ತರು ಶ್ರೀನಿವಾಸಪುರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಕೆ ಆರ್ ರಮೇಶ್ ಕುಮಾರ್ ಅವರ ಸ್ವಗ್ರಾಮವಾದ ಅಡ್ಡಗಲ್ ಗ್ರಾಮದ ಮನೆ ಬಾಗಿಲಿಗೆ ಬಂದು ಸೇರ್ಪಡೆಯಾಗುತ್ತಿದ್ದಾರೆ.
ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ 40 ವರ್ಷಗಳ ರಾಜಕಾರಣದಲ್ಲಿ ಒಮ್ಮೆ ಹಾಲಿ ಶಾಸಕರನ್ನು ಆಯ್ಕೆ ಮಾಡಿದರೆ ಇನ್ನೊಮ್ಮೆ ಮಾಜಿ ಶಾಸಕರನ್ನು ಆಯ್ಕೆ ಮಾಡಲಾಗುತ್ತಿತ್ತು. 2018 ರ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ರಮೇಶ್ ಕುಮಾರ್ ರವರನ್ನು ಆಯ್ಕೆ ಮಾಡಿದ್ದರು.
2023 ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಹಳಷ್ಟು ಕಾರ್ಯಕರ್ತರು ಶಾಸಕ ರಮೇಶ್ ಕುಮಾರ್ ರವರ ಸ್ವಗ್ರಾಮಕ್ಕೆ ಬಂದು ಸೇರ್ಪಡೆಯಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಸತತ ಮೂರನೇ ಬಾರಿಯೂ ಸಹ ರಮೇಶ್ ಕುಮಾರ್ ರವರು ಶಾಸಕರಾಗುತ್ತಾರ ಎಂಬ ಬಗ್ಗೆ ಚರ್ಚೆಗಳಿಗೆ ಆರಂಭವಾಗಿದೆ.
ಇಂದು ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದ ಮುಖಂಡರಾದ ಮರೆನ್ನ, ಮುನಿಯಪ್ಪ,ವೆಂಕಟೇಶ್,ನವೀನ್, ನರಸಿಂಹಪ್ಪ ಹಾಗೂ ಮಂಜುನಾಥ ರೆಡ್ಡಿ ರವರು ಶಾಸಕ ರಮೇಶ್ ಕುಮಾರ್ ರವರ ಮನೆಯಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.