• Fri. Apr 26th, 2024

PLACE YOUR AD HERE AT LOWEST PRICE

ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ದಿನೇ ದಿನೇ ರಾಜಕೀಯ ಕಾವು ರಂಗೇರುತ್ತಿದ್ದು ಪಕ್ಷಾಂತರ ಪರ್ವವೂ ಸಹ ಬಹಳ ಜೋರಾಗಿಯೇ ನಡೆಯುತ್ತಿದೆ.

ಬಹಳಷ್ಟು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ಪಕ್ಷಾಂತರ ಪರ್ವ ಮಾಡಿದಂತಹ ಸಮಯದಲ್ಲಿ ಅಭ್ಯರ್ಥಿಗಳೇ ಹೋಗಿ ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದು ಸಹಜ ಪ್ರಕ್ರಿಯೆಯಾಗಿದೆ.

ಆದರೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ಜೆಡಿಎಸ್ ಪಕ್ಷದ ಕಾರ್ಯಕರ್ತರು ಶ್ರೀನಿವಾಸಪುರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಕೆ ಆರ್ ರಮೇಶ್ ಕುಮಾರ್ ಅವರ ಸ್ವಗ್ರಾಮವಾದ ಅಡ್ಡಗಲ್ ಗ್ರಾಮದ ಮನೆ ಬಾಗಿಲಿಗೆ ಬಂದು ಸೇರ್ಪಡೆಯಾಗುತ್ತಿದ್ದಾರೆ.

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ 40 ವರ್ಷಗಳ ರಾಜಕಾರಣದಲ್ಲಿ ಒಮ್ಮೆ ಹಾಲಿ ಶಾಸಕರನ್ನು ಆಯ್ಕೆ ಮಾಡಿದರೆ ಇನ್ನೊಮ್ಮೆ ಮಾಜಿ ಶಾಸಕರನ್ನು ಆಯ್ಕೆ ಮಾಡಲಾಗುತ್ತಿತ್ತು.  2018 ರ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ರಮೇಶ್ ಕುಮಾರ್ ರವರನ್ನು ಆಯ್ಕೆ ಮಾಡಿದ್ದರು.

2023 ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಹಳಷ್ಟು ಕಾರ್ಯಕರ್ತರು ಶಾಸಕ ರಮೇಶ್ ಕುಮಾರ್ ರವರ ಸ್ವಗ್ರಾಮಕ್ಕೆ ಬಂದು ಸೇರ್ಪಡೆಯಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಸತತ ಮೂರನೇ ಬಾರಿಯೂ ಸಹ ರಮೇಶ್ ಕುಮಾರ್ ರವರು ಶಾಸಕರಾಗುತ್ತಾರ ಎಂಬ ಬಗ್ಗೆ ಚರ್ಚೆಗಳಿಗೆ ಆರಂಭವಾಗಿದೆ.

ಇಂದು  ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದ ಮುಖಂಡರಾದ ಮರೆನ್ನ, ಮುನಿಯಪ್ಪ,ವೆಂಕಟೇಶ್,ನವೀನ್, ನರಸಿಂಹಪ್ಪ ಹಾಗೂ ಮಂಜುನಾಥ ರೆಡ್ಡಿ ರವರು ಶಾಸಕ ರಮೇಶ್ ಕುಮಾರ್  ರವರ ಮನೆಯಲ್ಲಿ  ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!