• Fri. Apr 19th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ರಾಜ್ಯದಲ್ಲೇ ಅತಿ ಹೆಚ್ಚು ಅಭಿವೃದ್ಧಿ ಹೊಂದಿರುವ ಜಿಲ್ಲೆ ಕೋಲಾರ:ಸಂಸದ ಮುನಿಸ್ವಾಮಿ.

ಅತಿ ಹೆಚ್ಚು ಅಭಿವೃದ್ಧಿ ಹೊಂದಿರುವ ಜಿಲ್ಲೆ ಯಾವುದಾದರೂ ಇದ್ದರೆ ಅದು ನಮ್ಮ ಕೋಲಾರ ಜಿಲ್ಲೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಅವರು ಹೇಳಿದರು.

ಇಂದು ಬಂಗಾರಪೇಟೆ ಪುರಸಭೆ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ
ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ (ಹಂತ-4) ಯಡಿಯಲ್ಲಿ ವಿವಿಧ ಅಭಿವೃದ್ಧಿ
ಕಾಮಗಾರಿಗಳ ಗುದ್ದಲಿ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅದೇ ರೀತಿ ಬಂಗಾರಪೇಟೆ ಪುರಸಭೆ ಕಾರ್ಯಾಲಯ ನಗರಕ್ಕೆ ಸಂಬಂಧಪಟ್ಟ ಅಭಿವೃದ್ಧಿ ಕಾರ್ಯಕ್ರಮಗಳು
ಅಮೃತ್ ನಗರೋತ್ಥಾನ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡ ಅಭಿವೃದ್ಧಿ ಕಾಮಗಾರಿಗಳು, ಇತರೆ ಬಡಜನರ ಅಭಿವೃದ್ಧಿ ಕಾಮಗಾರಿಗಳು ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳಲ್ಲಿ ಚರಂಡಿ, ಡಾಂಬರೀಕರಣ, ರಸ್ತೆ ಅಭಿವೃದ್ಧಿ ಕಾಮಗಾರಿ.
 ಸಮುದಾಯಭವನ ಮತ್ತು ಗ್ರಂಥಾಲಯ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳನ್ನು ಶೀಘ್ರವೇ  ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಪ್ರತಿ ಹಳ್ಳಿಯಲ್ಲಿ ಮನೆ ಮನೆಗೂ ಕುಡಿಯುವ ನೀರಿನ  ಸೌಲಭ್ಯ ಮತ್ತು ಶೌಚಾಲಯ ನಿರ್ಮಾಣ. ಇಂದಿರಾ ಆವಾಸ್ ಯೋಜನೆಯಡಿ ಬಡವರಿಗೆ ಮನೆ ನಿರ್ಮಾಣ ಮತ್ತು ಅನೇಕ
ಕಾಮಗಾರಿಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಬಂಗಾರಪೇಟೆ ನಗರ ಅಭಿವೃದ್ಧಿಗಾಗಿ 454 ಲಕ್ಷ ರೂಪಾಯಿ
ವೆಚ್ಚದಲ್ಲಿ ಅಭಿವೃದ್ಧಿ ಆರಂಭವಾಗಿದೆ. ಅತಿ ಶೀಘ್ರದಲ್ಲೇ ಕಾಮಗಾರಿಗಳು ಪೂರ್ಣಗೊಳ್ಳುತ್ತವೆ. ಸಿಸಿಎಂಎಸ್ ರಡಿಯಲ್ಲಿ ಎಲ್ಲಾರಸ್ತೆಯ ದೀಪಗಳು ಮತ್ತು ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾವು ಮಂಡಳಿ ನಿಗಮದ ಅಧ್ಯಕ್ಷ  ಎಂ.ಕೆ.ವಾಸುದೇವ್, ಮಾಜಿ ವಿಧಾನಸಭಾ ಸದಸ್ಯ ಎಂ.ನಾರಾಯಣಸ್ವಾಮಿ, ಬಿ.ಪಿ. ವೆಂಕಟಮುನಿಯಪ್ಪ, ಬಂಗಾರಪೇಟೆ ಪುರಸಭೆ ಸದಸ್ಯ ಚಂದ್ರಾರೆಡ್ಡಿ,  ಮುಖಂಡ ಬಿ.ವಿ.ಮಹೇಶ್ ತಹಶೀಲ್ದಾರ್ ದಯಾನಂದ್, ಮುಖ್ಯಾಧಿಕಾರಿ ಜಿ.ಎಸ್.ಚಲಪತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Post

ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ
ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,
ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಬಿಜೆಪಿಯನ್ನು ಸೋಲಿಸಿ: ಮಂಜುನಾಥ್ ಅಣ್ಣಯ್ಯ

Leave a Reply

Your email address will not be published. Required fields are marked *

You missed

error: Content is protected !!