• Thu. Apr 25th, 2024

ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಲು ಮಕ್ಕಳ ಸಂತೆ: ಅ.ಮು.ಲಕ್ಷ್ಮೀನಾರಾಯಣ್.

PLACE YOUR AD HERE AT LOWEST PRICE

ಬೇತಮಂಗಲ: ವಿದ್ಯಾರ್ಥಿ ಜೀವನದಿಂದಲ್ಲೇ ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಲು ಮಕ್ಕಳ ಸಂತೆ ಪ್ರಮುಖ
ಪಾತ್ರವಹಿಸುತ್ತದೆ ಎಂದು ಮೀನುಗಾರರ ಸಹಕಾರ ಒಕ್ಕೂಟಗಳ ರಾಜ್ಯಾಧ್ಯಕ್ಷ ಅ.ಮು.ಲಕ್ಷ್ಮೀನಾರಾಯಣ್  ಹೇಳಿದರು.
ಗ್ರಾಮದ ಗ್ರಾಮೀಣ ಪ್ರೌಢ ಶಾಲೆ ಹಾಗೂ ಗ್ರಾಮೀಣ ಕಿರಿಯ ಕಾಲೇಜು ಅವರಣದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ
ಸಂತೆಗೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಸಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಮಕ್ಕಳ ಸಂತೆ ಅಂತಹ ಕಾರ್ಯಕ್ರಮಗಳನ್ನು ಅಯೋಜನೆ ಮಾಡುತ್ತಿರುವುದು ಶ್ಲಾಘನೀಯ ಸಂಗತಿಯಾಗಿದೆ.
ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಮಕ್ಕಳ ಸಂತೆಯಲ್ಲಿ ತೋಡಗಿಸಿಕೊಂಡು ವಿವಿಧ ರೀತಿಯ ವ್ಯಾಪಾರ ಮಾಡುವ
ಮೂಲಕ ಲಾಭ ಗಳಿಸುವ ಮಾರ್ಗಗಳನ್ನು ಕಂಡಿಕೊಳ್ಳಬೇಕು, ಹೆಚ್ಚು ವ್ಯಾಪಾರ ಮಾಡಿ ಲಾಭಗಳಿಸಿದ
ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯಿಂದ ಬಹುಮಾನ ನೀಡುವುದಾಗಿ ತಿಳಿಸಿದರು.
ಶಾಲೆಗಳಲ್ಲಿ ಶಿಕ್ಷಕರು ಮಕ್ಕಳ ವಿದ್ಯಾಭ್ಯಾಸದ ಜತೆಗೆ ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದಕ್ಕೆ
ಪೋಷಕರು ಭೇಟಿ ನೀಡಿ ಮಕ್ಕಳಲ್ಲಿನ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕೆಂದರು.
ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ತರಕಾರಿ, ವಿವಿಧ ರೀತಿಯ ತಿಂಡಿ, ಪಾನಿಪುರಿ, ತಂಪು ಪಾನಿಯ,  ಮೀನು ಅಂಗಡಿ, ಚಿಕನ್ ಅಂಗಡಿ, ಚಂಡು ಎಸೆತ, ಡಿಜೆ ಹಾಡುಗಳು, ವಸ್ತು ಪ್ರದರ್ಶನ ಸೇರಿದಂತೆ ವಿವಿಧ ಅಂಗಡಿಯನ್ನು ಮಕ್ಕಳು ಹಾಕಿದರು.
ಮಕ್ಕಳ ಸಂತೆಯಲ್ಲಿ ಮಕ್ಕಳ ವ್ಯಾಪಾರ ಹಾಗೂ ಇತರೆ ಚಟುವಟಿಕೆಗಳಿಗೆ ಶಾಲಾ ಶಿಕ್ಷಕರು ಸಹ ಅಗತ್ಯ ಪ್ರೋತ್ಸಾಹ ನೀಡಿ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸಹ ವ್ಯಾಪಾರ ಮಾಡಿದರು.
ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷ ಅರೀಫ್ ಖಾನ್, ಮುಖ್ಯ ಶಿಕ್ಷಕಿ ಶ್ಯಾಮಲಾ, ಪ್ರಾಂಶುಪಾಲ ಮಲ್ಲಿಕಾರ್ಜುನ್, ಕೋಶಾಧಿಕಾರಿ ಪ್ರಭಾಕರ್, ದತ್ತ ಸಾಯಿ ವಿದ್ಯಾ ಸಂಸ್ಥೆಯ ಜಲಜ ಮಂಜುನಾಥ್, ಸುಜಾತ, ಶಾಲಾ ಸಮಿತಿಯ ಶ್ರೀಮತಿ, ಸಹ ಶಿಕ್ಷಕರಾದ ಗೋಪಾಲ್ ಗೌಡ, ಮಂಜುಳಾ ಸೇರಿದಂತೆ ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.

Related Post

ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ
ತಳಸಮುದಾಯವರು ಇಂದಿನ ಸುಳ್ಳುಗಳ ಜೊತೆಗೆ ಟ್ಯಾಗ್ ಆಗುತ್ತಿರುವುದು ದುರಂತ – ಎಲ್.ಎನ್.ಮುಕು0ದರಾಜ್
ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ರವರಿಗೆ ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗ ಬೆಂಬಲ : ಡಾ.ಎಂ. ಚಂದ್ರಶೇಖರ್

Leave a Reply

Your email address will not be published. Required fields are marked *

You missed

error: Content is protected !!