PLACE YOUR AD HERE AT LOWEST PRICE
ಕೆಜಿಏಫ್:ಕ್ಷೇತ್ರದ ಪ್ರತಿಯೊಂದು ಹಳ್ಳಿಯೂ ಅಭಿವೃದ್ಧಿಯಲ್ಲಿ ಬದಲಾವಣೆ ಕಾಣಬೇಕಾದರೆ ಜೆಡಿಎಸ್ ಪಕ್ಷಕ್ಕೆ ಒಂದು ಅವಕಾಶ ಕಲ್ಪಿಸಿ ಎಂದು ಕೆಜಿಏಫ್ ಕ್ಷೇತ್ರದ ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ಮನವಿ ಮಾಡಿದರು.
ಕ್ಯಾಸಂಬಳ್ಳಿ ಗ್ರಾಪಂ ತೂಕಲ್ ಗ್ರಾಮಸ್ಥರೊಂದಿಗೆ ಕುಂದು ಕೊರತೆ ಬಗ್ಗೆ ಚರ್ಚಿಸಿ ಮಾತನಾಡಿ, ಕೆಜಿಏಫ್ ವಿಧಾನ ಸಭಾ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಪಕ್ಷಕ್ಕೆ 10ವರ್ಷ ಹಾಗೂ ಕಾಂಗ್ರೆಸ್ ಪಕ್ಷಕ್ಕೂ 5 ವರ್ಷಗಳ ಕಾಲ ಅಧಿಕಾರ ನೀಡಿದ್ದೀರಿ ಅದರೆ ಈ ಭಾರಿ ಜೆಡಿಎಸ್ ಪಕ್ಷಕ್ಕೆ ಅಶೀರ್ವಾದ ಮಾಡುವ ಮೂಲಕ ಚಿನ್ನದ ನಾಡಿನ ಅಭಿವೃದ್ಧಿಗೆ ಕೈ ಜೋಡಿಸಿ ಎಂದರು.
ರಾಜ್ಯದ ಸ ರ್ವಾತೋಮುಖ ಅಭಿವೃದ್ಧಿಗೆ ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಪಂಚರತ್ನ ಯೋಜನೆಯ ಮೂಲಕ ಬಡ ಮಕ್ಕಳಿಗೆ ಉನ್ನತ ಶಿಕ್ಷಣ, ಮಹಿಳೆಯರ ಸಬಲೀಕರಣ, ವಸತಿ ಯೋಜನೆ ಹಾಗೂ ಉಚಿತ ಆರೋಗ್ಯ ಸೇವೆ ಸೇರಿದಂತೆ ರಾಜ್ಯದ ಜನತೆಗಾಗಿ ಯೋಜನೆಗಳನ್ನು ರೂಪಿಸಿಕೊಂಡಿದ್ದಾರೆ, ರಾಜ್ಯದಲ್ಲಿ ಕುಮಾರಸ್ವಾಮಿ ಸರ್ಕಾರ ಅಧಿಕಾರಕ್ಕೆ ಬರಲು ಕೆಜಿಏಫ್ ಕ್ಷೇತ್ರದಿಂದ ನಮಗೆ ಅಶೀರ್ವಾದ ಮಾಡಬೇಕೆಂದರು.
ಜೆಡಿಎಸ್ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿಯೇ ಕುಮಾರಸ್ವಾಮಿ ಅವರು ರಾಜ್ಯದ ರೈತರ ಹಾಗೂ ಮಹಿಳಾ ಸಂಘಗಳ ಸಂಪೂರ್ಣ ಸಾಲ ಮನ್ನಾ ಮಾಡಲಿದ್ದಾರೆ, ಈಗಾಗಲೇ 2018ರಲ್ಲಿ ರೈತರ ಸಾಲ ಮನ್ನಾ ಮಾಡುವ ಮೂಲಕ ರಾಜ್ಯದಲ್ಲಿ ಚೆರಿತ್ರೆ ಬರೆದಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಮನೋಹರ್ ರೆಡ್ಡಿ, ವೆಂಗಸಂದ್ರ ಮಂಜುನಾಥ್, ನಟರಾಜ್, ಗಣೇಶ್, ನಾರಾಯಣಪ್ಪ, ಶಂಕರಪ್ಪ, ಬಾಬು ಸೇರಿದಂತೆ ಗ್ರಾಮದ ಯುವಕರು, ಹಿರಿಯರು ಉಪಸ್ಥಿತರಿದ್ದರು.