ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ರಾಜ್ಯದ ಅಭಿವೃದ್ಧಿಗೆ ಜೆಡಿಎಸ್ ಪಕ್ಷಕ್ಕೆ ಅವಕಾಶ ಕಲ್ಪಿಸುವ ಮೂಲಕ ರಾಜ್ಯ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿ ಎಂದು ಕೆಜಿಏಫ್ ಕ್ಷೇತ್ರದ ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ಮಾನವಿ ಮಾಡಿದರು.
ಬೇತಮಂಗಲದಲ್ಲಿ ಜೆಡಿಎಸ್ ಪಕ್ಷಕ್ಕೆ ಮುಖಂಡರನ್ನು ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿ, ಕೆಜಿಏಫ್ ವಿಧಾನ ಸಭಾ ಕ್ಷೇತ್ರದ ಮತದಾರರು ಬಿಜೆಪಿ ಪಕ್ಷಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಈ ಭಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಅಶೀರ್ವಾದ ಮಾಡುವ ವಿಶ್ವಾಸ ಇದೆ ಎಂದರು.
ರಾಜ್ಯದ ಸರ್ವ ಧರ್ಮಗಳ ಪ್ರಗತಿಗಾಗಿ ಕುಮಾರಸ್ವಾಮಿ ಅವರು ಪಂಚರತ್ನ ಯೋಜನೆಯ ಮೂಲಕ ಉನ್ನತ ಶಿಕ್ಷಣ, ಆರೋಗ್ಯ, ರೈತರ ಸಾಲ ಮನ್ನಾ, ಮಹಿಳಾ ಸಾಲ ಮನ್ನಾ, ವಸತಿ ಯೋಜನೆ ಹಾಗೂ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಮೂಲಕ 5 ಯೋಜನೆಗಳನ್ನು ಜಾರಿಗೆ ತರಲು ತಯಾರಿ ನಡೆಸಿದ್ದು, ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ
ಪಂಚರತ್ನ ಯೋಜನೆಯನ್ನು ಜಾರಿಗೊಳಿಸಲಿದ್ದಾರೆ ಎಂದರು.
ಕೆಜಿಏಫ್ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಗುಂಪುಗಾರಿಕೆ ಹಾಗೂ ಕಾಂಗ್ರೆಸ್ ಪಕ್ಷದಲ್ಲಿನ ಅಸಮಾದನದಿಂದ ಬೇಸತ್ತು,
ಕುಮಾರಸ್ವಾಮಿ ಅವರ ಯೋಜನೆಗಳನ್ನು ಮೆಚ್ಚಿ ಸ್ವಯಂ ಪ್ರೇರಿತರಾಗಿ ಕೆಜಿಏಫ್ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆಯ ಮೂಲಕ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ರಾಷ್ಟ್ರೀಯ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯ ಪರ್ವ ಶುರುವಾಗಿದೆ ಎಂದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಚಂಗೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಮನೋಹರ್ ರೆಡ್ಡಿ, ಗ್ರಾಪಂ
ಉಪಾಧ್ಯಕ್ಷ ಯೋಗೇಶ್, ಗ್ರಾಪಂ ಸದಸ್ಯ ವೆಂಗಸಂದ್ರ ಮಂಜುನಾಥ್, ಮುಖಂಡರಾದ ನಟರಾಜ್, ಶ್ರೀನಾಥ್, ಸಂತೋಷ್, ವಿಜಯ್, ನಾಗರಾಜ್, ಹರೀಶ್, ಕೃಷ್ಣಂರಾಜ್, ಸುಬ್ಬು, ಗಣೇಶ್ ಮೊದಲಾದವರಿದ್ದರು.