PLACE YOUR AD HERE AT LOWEST PRICE
ಯಾದವ ಸಮಾಜದ ಕೋಲಾರ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಉದ್ಯಮಿ ವಕ್ಕಲೇರಿ ನಾರಾಯಣಸ್ವಾಮಿರವರನ್ನು ಕೋಲಾರ ತಾಲ್ಲೂಕಿನ ಜೋಡಿಕೃಷ್ಣಾಪುರ, ನರಸಾಪುರದ ಯುವಕರು ಆತ್ಮೀಯವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣಸ್ವಾಮಿ, ಹಿಂದುಳಿದಿರುವ ಯಾದವ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಂಘಟನೆಯನ್ನು ಬಲಗೊಳಿಸಲಾಗುವುದು, ಇತರೆ ಹಿಂದುಳಿದ ವರ್ಗಗಳ ಸಹಕಾರ ಪಡೆಯುವುದಾಗಿಯೂ ತಿಳಿಸಿ, ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟನೆಯ ಶಕ್ತಿ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಂಘಟನೆ ಬೆಳೆಸಲು ಪಣ ತೊಟ್ಟಿರುವುದಾಗಿ ತಿಳಿಸಿದರು.
ಹಿಂದುಳಿದ ಸಮುದಾಯಗಳನ್ನು ಒಗ್ಗೂಡಿಸುವ ಹಿಂದುಳಿದ ಒಕ್ಕೂಟವನ್ನು ಬಲಗೊಳಿಸುವ ನಿಟ್ಟಿನಲ್ಲಿ ತಮ್ಮ ಕೈಲಾದಷ್ಟು ಪರಿಶ್ರಮ ಹಾಕುವುದಾಗಿಯೂ, ಎಲ್ಲಾ ಸಮುದಾಯದ ಪ್ರಮುಖ ಮುಖಂಡರೊಂದಿಗೆ ಚರ್ಚಿಸಿ, ಇಡೀ ಹಿಂದುಳಿದ ವರ್ಗಗಳ ಸಮಸ್ಯೆಗಳ ನಿವಾರಣೆಗೆ ಕ್ರಮವಹಿಸುವುದಾಗಿಯೂ ತಿಳಿಸಿದರು.
ಈ ಸಂದರ್ಭದಲ್ಲಿ ಹೊಸಕೋಟೆ ದೇವರಾಜ ಯಾದವ್, ಧೀರಜ್ ಮತ್ತು ಯುವಕರ ತಂಡ ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಿತು.
ಕೋಲಾರ ಹೊರ ವಲಯದ ಹೋಟೆಲ್ ಬಳಿ ನಡೆದ ಕಾರ್ಯಕ್ರಮದಲ್ಲಿ ನರಸಾಪುರ, ಜೋಡಿ ಕೃಷ್ಣಾಪುರ,ಇತರೆ ಯುವಕರು ಸಹ ಹಾಜರಿದ್ದು, ಸಮುದಾಯದ ಅಭಿವೃದ್ದಿಗೆ ಕೈಜೋಡಿಸುವ ಭರವಸೆ ನೀಡಿದರು.
ಸುದ್ದಿ ಓದಿ ಹಂಚಿ: