PLACE YOUR AD HERE AT LOWEST PRICE
ಕೆಜಿಎಫ್:ವಕೀಲರ ರಕ್ಷಣಾ ಕಾಯ್ದೆಯ ಮಸೂದೆಯನ್ನು ಈ ಬಾರಿ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಿ ಜಾರಿಗೊಳಿಸುವಂತೆ ಆಗ್ರಹಿಸಿ ತಾಲ್ಲೂಕು ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ನ್ಯಾಯಾಲಯ ಸಂಕೀರ್ಣದ ಬಳಿ ಪ್ರತಿಭಟನೆ ನಡೆಸಿ ಮಾತನಾಡಿದ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ರಾಜಗೋಪಾಲಗೌಡ, ರಾಜ್ಯದಲ್ಲಿ ವಕೀಲರ ವಿರುದ್ಧ ಸಾರ್ವಜನಿಕರು ಹಾಗೂ ಪೊಲೀಸರು ಮತ್ತು ಪೊಲೀಸ್ ಅಧಿಕಾರಿಗಳು ನಿರಂತರವಾಗಿ ಹಿಂಸೆ ಮತ್ತು ದಬ್ಬಾಳಿಕೆ ನಡೆಯುತ್ತಿದ್ದು, ವಕೀಲರು ತಮ್ಮ ವೃತ್ತಿಯನ್ನು ನಿರ್ಭೀತಿಯಿಂದ ನ್ಯಾಯಯುತವಾಗಿ ನಡೆಸಲು ತೊಂದರೆಯಾಗಿರುತ್ತದೆ.
ವಕೀಲರು ತಮ್ಮ ವೃತ್ತಿಯನ್ನು ನಿರ್ಭೀತಿಯಿಂದ ಮತ್ತು ನ್ಯಾಯಯುತವಾಗಿ ನಡೆಸಲು ಹಾಗೂ ವಿನಾಕಾರಣ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ ಮತ್ತು ದೌರ್ಜನ್ಯವನ್ನು ತಡೆಯಬೇಕಾಗಿದ್ದು ವಕೀಲರ ಹಿತರಕ್ಷಣಾ ಕಾಯ್ದೆಯನ್ನು ಅನುಷ್ಟಾನಗೊಳಿಸುವುದು ತುಂಬಾ ಅವಶ್ಯಕವಾಗಿರುತ್ತದೆ ಎಂದರು.
ಈ ಬಾರಿ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ವಕೀಲರ ರಕ್ಷಣಾ ಕಾಯ್ದೆಯ ಕರಡನ್ನು ಮಂಡಿಸಿ, ಅಂಗೀಕರಿಸಿ ಆದಷ್ಟು ಬೇಗನೇ ವಕೀಲರ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಈ ವೇಳೆ ಉಪಾಧ್ಯಕ್ಷ ಮಣಿವಣ್ಣನ್, ಪ್ರಧಾನ ಕಾರ್ಯದರ್ಶಿ ಕೆ.ಸಿ.ನಾಗರಾಜ್, ಜಂಟಿ ಕಾರ್ಯದರ್ಶಿ ಎಂ.ಮಗೇಂದ್ರನ್, ಖಜಾಂಚಿ ಮನೋಗರನ್ ಮೊದಲಾದವರು ಇದ್ದರು.