• Thu. Apr 25th, 2024

PLACE YOUR AD HERE AT LOWEST PRICE

ಕೋಲಾರ ತಾಲೂಕಿನ ವೇಮಗಲ್ ಕ್ರೀಡಾಂಗಣದಲ್ಲಿ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಸೋಮವಾರ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೇಮಗಲ್‌ನಲ್ಲಿ ವಿವಿಧ ದೇವಾಲಯಗಳು, ಮಸೀಧಿಗೆ ಭೇಟಿ ನೀಡಿದರು.

ಬೆಂಗಳೂರಿನಿಂದ ಕಾರಿನಲ್ಲಿ ಆಗಮಿಸಿದ ಸಿದ್ದರಾಮಯ್ಯರನ್ನು ರಾಮಸಂದ್ರ ಗಡಿಯಲ್ಲಿ ಅಭಿಮಾನಿಗಳು ಹೂಮಾಲೆ ಹಾಕಿ ಆತ್ಮೀಯವಾಗಿ ಸ್ವಾಗತಿಸಿದರು.

ನಂತರ ನರಸಾಪುರ ಸಮೀಪದ ಬೆಳ್ಳೂರು ಯೋಗಾಚಾರ್ಯ ಬಿ.ಕೆ.ಎಸ್.ಅಯ್ಯಂಗಾರ್ ಯೋಗ ಕೇಂದ್ರಕ್ಕೆ ಭೇಟಿ ನೀಡಿದರು. ಅಲ್ಲಿ ಯೋಗಾಚಾರ್ಯರ ಸಮಾಧಿ ಮತ್ತು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು.

ಮಾರ್ಗಮಧ್ಯೆ ವೇಮಗಲ್ ಕುರುಬರಹಳ್ಳಿ ಗೇಟ್ ಬಳಿ ಇರುವ ಆಂಜನೇಯಸ್ವಾಮಿ ದೇವಾಲಯಕ್ಕೆ ದಾರಿ ಮಧ್ಯೆ ನಿಂತಿದ್ದ ಗ್ರಾಮಸ್ಥರ ಮನವಿ ಮೇರೆಗೆ ಭೇಟಿ ನೀಡಿ ದರ್ಶನ ಪಡೆದುಕೊಂಡರು.

ಆನಂತರ ವೇಮಗಲ್‌ನಲ್ಲಿ ಧರ್ಮರಾಯಸ್ವಾಮಿ ದೇವಾಲಯ, ಜಾಮಿಯಾ ಮಸೀಧಿ ಮತ್ತು ರೇಣುಕಾ ಯಲ್ಲಮ್ಮ ದೇವಾಲಯಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಾಲಯ ಮುಂಭಾಗ ಕಾದು ನಿಂತಿದ್ದ ಮಹಿಳೆಯರು ಸಿದ್ದರಾಮಯ್ಯರಿಗೆ ಆರತಿ ಬೆಳಗಿ ಸ್ವಾಗತಿಸಿದರು.

ಜಾಮಿಯಾ ಮಸೀಧಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಸಿದ್ದರಾಮಯ್ಯರಿಗೆ ಧಾರ್ಮಿಕ ಪೇಟಾ ತೊಡಿಸಿ, ಸಿಹಿ ನೀಡಿ ಸತ್ಕರಿಸಿದರು.

ದೇವಾಲಯ ಮಸೀಧಿ ಭೇಟಿ ನಂತರ ವೇಮಗಲ್ ಬಹಿರಂಗ ಸಮಾರಂಭದ ವೇದಿಕೆಗೆ ಸಿದ್ದರಾಮಯ್ಯ ಆಗಮಿಸಿದ್ದು, ಇವರ ಜೊತೆಗೆ ಕಾಂಗ್ರೆಸ್ ಮುಖಂಡರು, ಹಾಲಿ ಶಾಸಕರು, ಮಾಜಿ ಶಾಸಕರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಸಾಥ್ ನೀಡುತ್ತಿದ್ದಾರೆ.

ಸುದ್ದಿ ಓದಿ ಹಂಚಿ:

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!