• Thu. May 16th, 2024

PLACE YOUR AD HERE AT LOWEST PRICE

ಮುಳಬಾಗಿಲು:ವರದಕ್ಷಿಣೆ ಕಿರುಕುಳ ಹಿನ್ನಲೆ ಡೆತ್ ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದು ಗಂಡನ ಮನೆಯ ಮುಂದೆ ಮೃತದೇಹವಿಟ್ಟು ಮೃತಳ ಪೋಷಕರು ಪ್ರತಿಭಟನೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ದೊಡ್ಡಮಾದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

28 ವರ್ಷದ ರಾಣಿ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ, ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ದೊಡ್ಡಮಾದೇನಹಳ್ಳಿ ಗ್ರಾಮದ ಗಂಡನ ಮನೆ ಎದುರು ಪೋಷಕರ ನೆನ್ನೆ ರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

ಜೀವನ್ ಕುಮಾರ್ ಎಂಬ ವ್ಯಕ್ತಿಯನ್ನು 8 ತಿಂಗಳ ಹಿಂದೆ ಮದುವೆಯಾಗಿದ್ದ ರಾಣಿ, ಪತಿ ಜೀವನ್ ಕುಮಾರ್ ಹಾಗು ಅತ್ತೆ, ಮಾವ, ಮೈದುನ ಸೇರಿ 5 ಮಂದಿ ಹೆಸರು ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.

ಜೀವನ್ ಕುಮಾರ್ ತಂದೆ ಕೋಲಾರದ ಆವಣಿ ಗ್ರಾಮ ಪಂಚಾಯ್ತಿ PDO ವರದರಾಜು ಮನೆ ಎದುರು ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರಿನ ಸಂಬಂದಿಕರ ಮನೆಯಲ್ಲಿ ನೇಣಿಗೆ ಶರಣಾಗಿದ್ದ ರಾಣಿ KGF ತಾಲೂಕಿನ ಪೆದ್ದಪ್ಪಲ್ಲಿ ಗ್ರಾಮದವರಾಗಿದ್ದಾರೆ.

ಪತ್ನಿ ಸಾವಿನ ವಿಚಾರ ತಿಳಿದು ಗಂಡ ಜೀವನ್ ಕುಮಾರ್ ಪರಾರಿಯಾಘಿದ್ದಾನೆ. ಮದುವೆ ನಂತರ ಬೆಂಗಳೂರಿನಲ್ಲೆ ವಾಸವಿದ್ದರು. ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದರು. ನ್ಯಾಯಕ್ಕಾಗಿ ಮೃತಳ ಪೋಷಕರು ಸಂಬಧಿಕರ ಅಗ್ರಹಿಸಿದರು.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!