• Sat. May 4th, 2024

ಕೋಲಾರ I ಸಿಂಗಾಪೂರ್ ಗೋವಿಂದು ಬುಡ್ಗಜಂಗಮ ಜಾತಿ ಪ್ರಮಾಣ ಪತ್ರ ರದ್ದು

PLACE YOUR AD HERE AT LOWEST PRICE

ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಮತ್ತೊರ್ವ ಟಿಕೆಟ್ ಆಕಾಂಕ್ಷಿ ಸಿಂಗಪೂರ್ ಗೋವಿಂದುರ ಪರಿಶಿಷ್ಟ ಜಾತಿಗೆ ಸೇರಿದ ಬುಡ್ಗ ಜಂಗಮ ಜಾತಿ ಪ್ರಮಾಣ ಪತ್ರವನ್ನು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ರದ್ದುಗೊಳಿಸಿದೆ.

ಈ ಹಿಂದೆ ಸಿಂಗಪೂರ್ ಗೋವಿಂದು ಮತ್ತು ಅವರ ಪುತ್ರ ಕೃಷ್ಣದೇವರಾಯರಿಗೆ ಬುಡ್ಗಜಂಗಮ ಜಾತಿ ಪ್ರಮಾಣ ಪತ್ರವನ್ನು ನೀಡಲಾಗಿತ್ತು. ಆದರೆ, ವಿಚಾರಣೆ ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರ ಪಡೆದಿರುವ ಕುರಿತು ಯಾವುದೇ ದಾಖಲಾತಿಗಳು ಕಚೇರಿಯಲ್ಲಿ ಲಭ್ಯವಿರಲಿಲ್ಲ. ಇವರ ಸಹೋದರರು ಮತ್ತು ಇತರೆ ರಕ್ತ ಸಂಬಂಧಿಕರಿಗೆ ಜಾತಿ ಪ್ರಮಾಣ ಪತ್ರವನ್ನು ನೀಡಿರಲಿಲ್ಲ.

ಗುಪ್ತ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಸಿಂಗಾಪೂರ್ ಗೋವಿಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಸಂಬಂಧಿಕರಾಗಿರುವುದು ದೃಢಪಟ್ಟಿರುವುದರಿಂದ ಹಾಗೂ ಪಡೆದುಕೊಂಡಿರುವ ಬುಡ್ಗಜಂಗಮ ಜಾತಿ ಪ್ರಮಾಣ ಪತ್ರವನ್ನು ಸಮರ್ಥಿಸಿಕೊಳ್ಳುವ ನೈಜ ದಾಖಲೆಗಳನ್ನು ನೀಡಲು ಸಾಕಷ್ಟು ಬಾರಿ ಅವಕಾಶ ನೀಡಿದರೂ ಉಪಯೋಗಿಸಿಕೊಳ್ಳಲಿಲ್ಲವೆಂಬ ಕಾರಣಕ್ಕೆ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯು ಬುಡ್ಗಜಂಗಮ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಈಗಾಗಲೇ ಅವರು ಪಡೆದುಕೊಂಡಿರುವ ಬುಡ್ಗ ಜಂಗಮ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸುವಂತೆ ಮುಳಬಾಗಿಲು ತಹಸೀಲ್ದಾರ್‌ರಿಗೆ ಆದೇಶಿಸಿದೆ.

ಸುದ್ದಿ ಓದಿ ಹಂಚಿ:

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!