PLACE YOUR AD HERE AT LOWEST PRICE
*ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ.*
ಕೆಜಿಎಫ್: ಆಂದ್ರ ಗಡಿ ಭಾಗದ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸುಮಾರು 30 ವರ್ಷಗಳಿಂದ ಉತ್ತಮ ಶಿಕ್ಷಣ ನೀಡುತ್ತಿರುವ ಶ್ರೀ ವಿವೇಕಾನಂದ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವವನ್ನು ಆಚರಿಸಲಾಯಿತು.
ಬೇತಮಂಗಲ ಹೋಬಳಿ ಎನ್.ಜಿ.ಹುಲ್ಕೂರು ಗ್ರಾಮದ ವಿವೇಕಾನಂದ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ 30ನೇ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮ ಸಡಗರದಿಂದ ನಡೆಸಲಾಯಿತು.
ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಒಂದು ವರ್ಷದಲ್ಲಿ ಶಿಕ್ಷಣ, ಕ್ರೀಡೆ, ಕಲೆ ಅಂತಹ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಭಾರ್ಗವ್ ರಾಮ್, ಮುಖ್ಯ ಶಿಕ್ಷಕರಾದ ಸುರೇಶ್ ಕುಮಾರ್, ಸಹ ಶಿಕ್ಷಕರಾದ ಸುರೇಶ್, ರಾಮರತ್ನ, ಶ್ರೀನಿವಾಸಪ್ಪ, ಸೀನಪ್ಪ, ಹರೀಶ್ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.