PLACE YOUR AD HERE AT LOWEST PRICE
ಕೆಜಿಎಫ್:ಕರ್ನಾಟಕ ಮೂಲ ನಿವಾಸಿಗಳ ಸಂಘದ ರಾಜ್ಯಾಧ್ಯಕ್ಷ ಚಳುವಳಿ ರಾಜಣ್ಣ ಅವರ ಸೂಚನೆಯಂತೆ ಜಿಲ್ಲಾಧ್ಯಕ್ಷ ನಾಗರಾಜ್ ನೇತೃತ್ವದಲ್ಲಿ ಕೆಜಿಎಫ್ ತಾಲ್ಲೂಕು ಸಂಘಕ್ಕೆ ಪದಾಧಿಕಾರಿಗಳನ್ನು ನೇಮಿಸಲಾಯಿತು.
ಬೇತಮಂಗಲದ ಹಳೆಯ ಬಡಾವಣೆಯ ಶ್ರೀ ಸಂಗಮೇಶ್ವರ ಸ್ವಾಮಿ ದೇವಾಲಯದ ಅವರಣದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ಮುಖಂಡರೊಂದಿಗೆ ಸಭೆ ನಡೆಸಿ ನೂತನವಾಗಿ ತಾಲ್ಲೂಕು ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಕೆಜಿಎಫ್ ತಾಲ್ಲೂಕು ಅಧ್ಯಕ್ಷರಾಗಿ ಸತೀಶ್ ನಾಯಕ್, ಸಂಚಾಲಕರಾಗಿ ವೇಣುಗೋಪಾಲ್, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಜ್ಯೋತಿ, ಸಂಚಾಲಕಿಯಾಗಿ ಲಕ್ಷ್ಮೀ, ಯುವ ಘಟಕದ ಅಧ್ಯಕ್ಷರಾಗಿ ನರೇಂದರ್ ಅವರುಗಳನ್ನು ಆಯ್ಕೆ ಮಾಡಿ ಆದೇಶ ಪತ್ರ ನೀಡಿ ಅಭಿನಂದಿಸಲಾಯಿತು.
ಈ ವೇಳೆ ಜಿಲ್ಲಾ ಸಂಚಾಲಕ ಧರ್ಮಮಿತ್ರ ವಿಜಯ್ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕಾಂತಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾರೋಹಳ್ಳಿ ಸುರೇಶ್, ಮುಖಂಡರಾದ ಸುಬ್ಬರಾಯಪ್ಪ, ಮಾಲ್ಲೂರು ತಾಲ್ಲೂಕು ಉಪಾಧ್ಯಕ್ಷ ಮುನಿರಾಜು, ಸೀನಪ್ಪ ಸೇರಿದಂತೆ ಮುಖಂಡರು ಹಾಗೂ ಯುವಕರು ಭಾಗವಹಿಸಿದ್ದರು.