PLACE YOUR AD HERE AT LOWEST PRICE
ಮಾಲೂರು:ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಕಾನೂನು ಸೇವಾ ಪ್ರಾಕಾರದ ಅಧ್ಯಕ್ಷರು ಹಾಗೂ ಹೈಕೋರ್ಟ್ ನ್ಯಾಯ ಮೂರ್ತಿಗಳಾದ ಬಿ. ವೀರಪ್ಪ ಭೇಟಿ ನೀಡಿ ಪರಿಶೀಲಿಸಿ, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವುದರ ಮೂಲಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸಲಹೆ ನೀಡಿದರು.
ಆಸ್ಪತ್ರೆಯ ವಾರ್ಡ್ಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ ಬಳಿಕ ಅವರಿಂದಲೇ ಸಮಸ್ಯೆಗಳ ಬಗ್ಗೆ ತಿಳಿದುಕೊಂಡರು. ಆಸ್ಪತ್ರೆಯಲ್ಲಿನ ಸ್ವಚ್ಛತೆ,ಕೊಠಡಿಗಳ ಕೊರತೆ ಕಂಡು ಆಸ್ಪತ್ರೆಯಲ್ಲಿನ ಔಷಧ ವಿತರಣಾ ಕೇಂದ್ರ ಮುಚ್ಚಿರುವುದನ್ನು ಕಂಡು ಸರ್ಕಾರಿ ಆಸ್ಪತ್ರೆಯ ಆಡಳಿತಾಕಾರಿ ಡಾ.ವಸಂತ್ ಅವರನ್ನು ಪ್ರಶ್ನಿಸಿದರು.
ಆಸ್ಪತ್ರೆಯಲ್ಲಿ ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯದ ಕೊರತೆಯಿಂದ ರೋಗಿಗಳು ತೊಂದರೆ ಪಡುವಂತಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಮತ್ತು ಮಧ್ಯಮ ವರ್ಗದ ರೋಗಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಭೇಟಿ ನೀಡುತ್ತಾರೆ. ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಸರ್ಕಾರ ಬೇಕಾದಷ್ಟು ಅನುದಾನವನ್ನು ಬಿಡುಗಡೆ ಮಾಡುತ್ತಿದ್ದು, ವೈದ್ಯರು ಸಮರ್ಪಕ ಚಿಕಿತ್ಸೆ ನೀಡಬೇಕು ಮತ್ತು ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಮಾತನಾಡಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಪ್ರತಿದಿನ ಸಾವಿರಕ್ಕೂ ಹೆಚ್ಚು ಹೊರರೋಗಿಗಳು ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಾರೆ. ಇಲ್ಲಿನ ವೈದ್ಯರು ಹಾಗೂ ಸಿಬ್ಬಂದಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದು ಆಸ್ಪತ್ರೆಯ ಕಟ್ಟಡ ಬಹಳ ಹಳೆಯದಾಗಿದೆ ರೋಗಿಗಳಿಗೆ ಅನುಗುಣವಾಗಿ ಕಟ್ಟಡದ ಕೊರತೆ ಇದೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ. ಇರುವುದರಲ್ಲಿ ರೋಗಿಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ, ಜಿಲ್ಲಾ ಸದಸ್ಯ ಸುನಿಲ್ ಹೊಸಮನಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್, ನ್ಯಾಯಾದೀಶರಾದ ಎಸ್.ಎಂ.ಶೈಲ, ಪಾರ್ವತಮ್ಮ, ವೈದ್ಯಾಕಾರಿ ವಸಂತ್, ಸರ್ಕಲ್ ಇನ್ಸ್ಪೆಕ್ಟರ್ ಚಂದ್ರದಾರ್ ಮೊದಲಾದವರು ಹಾಜರಿದ್ದರು.