• Sun. Apr 28th, 2024

PLACE YOUR AD HERE AT LOWEST PRICE

ಕೆಜಿಎಫ್:ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಭರವಸೆಗಳು ಚುನಾವಣೆಗೆ ಮಾತ್ರ ಸೀಮಿತ,  ಅಧಿಕಾರಕ್ಕೆ ಯಾವ ಭರವಸೆಗಳೂ ಈಡೇರುವುದಿಲ್ಲವೆಂದು ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ಹೇಳಿದರು.

ಕೆಜಿಎಫ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಗಳ ಬಗ್ಗೆ ಪ್ರಚಾರ ನಡೆಸಿ ಮಾತನಾಡಿ, ತಾಲ್ಲೂಕಿನಲ್ಲಿ ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿ ಮೋಸ ಹೋಗಿದ್ದೀರಿ, ಮತ್ತೆ ರಾಷ್ಟ್ರೀಯ ಪಕ್ಷಗಳಿಗೆ ಅಧಿಕಾರ ನೀಡಿ ಮೋಸ ಹೋಗಬೇಡಿ ಎಂದರು.

ರಾಷ್ಟ್ರೀಯ ಪಕ್ಷಗಳು ಯಾವುದೇ ಯೋಜನೆಯನ್ನು ಜಾರಿಗೆ ತಂದು ಜನರಿಗೆ ಉಪಯೋಗ ಮಾಡಬೇಕಾದರೆ, ಕೇಂದ್ರದಿಂದ ಅನುಮತಿ ಪಡೆಯಬೇಕು, ಅದರೆ ಕೇಂದ್ರ ಸರ್ಕಾರಗಳು ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಅನುಮತಿ ನೀಡುವುದಿಲ್ಲ, ಅದರೆ ಜೆಡಿಎಸ್ ಪಕ್ಷಕ್ಕೆ ಬಹುಮತದ ಅಧಿಕಾರ ನೀಡಿದಾಗ ಅಧಿಕಾರ ಸ್ವೀಕಾರ ಮಾಡಿದ 24 ಗಂಟೆಗಳಲ್ಲಿಯೇ ರಾಜ್ಯದ ಜನತೆಗೆ ಬೇಕಿರುವ ಯೋಜನೆಗಳು ಜಾರಿಯಾಗಲಿದೆ ಎಂದರು.

ಕೆಜಿಎಫ್ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ 10 ವರ್ಷ ಶಾಸಕರಾಗಿ, 5 ವರ್ಷ ಕಾಂಗ್ರೆಸ್ ಶಾಸಕರಾಗಿ ಅಧಿಕಾರ ನೀಡಿದ್ದೀರಿ, ಈ ಭಾರಿ ಒಂದು ಅವಕಾಶ ಜೆಡಿಎಸ್ ಪಕ್ಷಕ್ಕೆ ಕಲ್ಪಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!