PLACE YOUR AD HERE AT LOWEST PRICE
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಕೋಲಾರ ನಗರದ ಎಂ.ಜಿ.ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಜರುಗಿದೆ.
ಹಲ್ಲೆಗೊಳಗಾದ ಮಹಿಳೆಯನ್ನು ಕವಿತ ಎಂದು ಗುರುತಿಸಲಾಗಿದೆ.
ಮಹಿಳೆ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಈತ ಹಲ್ಲೆಗೊಳಗಾದ ಮಹಿಳೆಯ ಭಾವ ಎನ್ನಲಾಗಿದೆ.
ಕೋಲಾರ ನಗರದ ಎಂ.ಜಿ.ರಸ್ತೆಯಲ್ಲಿ ಬೆಳಿಗ್ಗೆ ನಡೆದು ಬರುತ್ತಿದ್ದ ಕವಿತಾರ ಮೇಲೆ ಅಲ್ಲಿಗೆ ಬಂದ ಶ್ರೀನಿವಾಸ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಮಚ್ಚಿನೇಟಿನಿಂದ ಮಹಿಳೆ ಕವಿತ ತೀವ್ರವಾಗಿ ಗಾಯಗೊಂಡು ಅಲ್ಲಿಯೇ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದಾರೆ.
ಹಲ್ಲೆ ಗಮನಿಸಿದ ನಂತರ ರಸ್ತೆಯಲ್ಲಿ ಹೋಗುತ್ತಿದ್ದವರು ಮಹಿಳೆಯ ನೆರವಿಗೆ ಧಾವಿಸಿದ್ದಾರೆ. ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಲು ಪ್ರಯತ್ನಿಸಿದ ಶ್ರೀನಿವಾಸ್ರನ್ನು ಸಾರ್ವಜನಿಕರು ಹಿಡಿದು ಕೊಂಡಿದ್ದಾರೆ.
ಸಮೀಪದಲ್ಲಿಯೇ ಇದ್ದ ಕೋಲಾರ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದು ಮಹಿಳೆಯನ್ನು ಎಸ್ ಎನ್ ಆರ್ ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದಾರೆ. ಮತ್ತು ಆರೋಪಿ ಶ್ರೀನಿವಾಸ್ರನ್ನು ತಮ್ಮ ವಶಕ್ಕೆ ತೆಗೆದು ಕೊಂಡಿದ್ದಾರೆ.
ಕೋಲಾರ ನಗರದಲ್ಲಿ ಬೆಳ್ಳಂಬೆಳಿಗ್ಗೆಯೇ ನಡೆದ ಈ ಘಟನೆಯಿಂದ ನಾಗರೀಕರು ಆತಂಕಗೊಂಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಧಾವಿಸಿ ಬಂದು ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸುದ್ದಿ ಓದಿ ಹಂಚಿ: