• Wed. May 8th, 2024

PLACE YOUR AD HERE AT LOWEST PRICE

ಕೆಜಿಎಫ್:ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸಾರ್ವಜನಿಕ ಶೌಚಾಲಯ ಕಟ್ಟಡದ ಕಾಮಗಾರಿಗೆ ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಭೂಮಿಪೂಜೆ ನೆರವೇರಿಸಿದನು.

ಈ ವೇಳೆ ಮಾತನಾಡಿದ ಅವರು ಸುಲಭ್ ಇಂಟರ್ ನ್ಯಾಶನಲ್ ಸೋಶಿಯಲ್ ಸರ್ವೀಸ್ ಆರ್ಗನೈಸೇಶನ್, ಇವರು ಹಲವು ಸಾಮಾಜಿಕ ಸಾರ್ವಜನಿಕ ಸೇವಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಯಾಗಿದ್ದು,  ಸದರಿ ಸಂಸ್ಥೆಯವರು ಸುಮಾರು ಕಡೆ ಸಾರ್ವಜನಿಕ ಶೌಚಾಲಯಗಳನ್ನು ನಿರ್ವಹಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.

ಸದರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಿಶ್ವನಾಥ್ ರವರನ್ನು ಸಂಪರ್ಕಿಸಿ ಕೆ.ಜಿ.ಎಫ್. ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸುಸಜ್ಜಿತವಾದ ಶೌಚಾಲಯ ನಿರ್ಮಾಣ ಮಾಡಿಕೊಡಲು ಕೋರಿದ ಪರಿಣಾಮ ಸುಲಭ್ ಸಂಸ್ಥೆಯವರು ರೂ.30.00 ಲಕ್ಷ ವೆಚ್ಚದಲ್ಲಿ ುಚಿತವಾಗಿ  ಶೌಚಾಲಯ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಇದು ಕಡಿಮೆ ಧರದಲ್ಲಿ ಪಾವತಿಸಿ ಉಪಯೋಗಿಸುವ ಶೌಚಾಲಯವಾಗಿದ್ದು, ಸಂಸ್ಥೆಯವರೇ ಖುದ್ದು ನಿರ್ವಹಣೆ ಮಾಡುವ ಜವಾಬ್ದಾರಿಯನ್ನು ತೆಗೆದುಕೊಂಡಿರುತ್ತಾರೆ.ಮೂರು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಮುಖ್ತಗೊಳಿಸಲಾಗುವುದು ಎಂದು ಸಂಸ್ಥೆಯ ಮುಖ್ಯಸ್ತರು ಭರವಸೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಸುರೇಶ್ ಕುಮಾರ್, ನಗರಸಭೆ ಉಪಾದ್ಯಕ್ಷೆ ದೇವಿ ಗಣೇಶ್, ನಗರಸಭೆ ಸದಸ್ಯರಾದ ಪ್ರವೀಣ್ ಕುಮಾರ್ ಜಯಪಾಲ್ ಮುಖಂಡರಾದ ಶ್ರೀನಿವಾಸನ್, ದಯಾಶಂಕರ್ ಮಗೇಂದ್ರನ್, ಫೂಟೋ ಬಾಬು, ರಶೀದ್ ಖಾನ್, ಲತಾ ಹಾಗೂ ಪ್ರಮುಖ ಮುಖಂಡರು ಹಾಜರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!