PLACE YOUR AD HERE AT LOWEST PRICE
ಕೆಜಿಎಫ್:ಕರ್ನಾಟಕ ರಾಜ್ಯ ರೈತ ಸಂಘದ ಪುಟ್ಟಣ್ಣಯ್ಯ ಬಣದ ವತಿಯಿಂದ ಕೋಲಾರ ಜಿಲ್ಲಾ ಸಂಚಾಲಕರಾದ ವಡ್ಡಹಳ್ಳಿ ಮಂಜುನಾಥ್, ಕರಗ ನಾರಾಯಣಸ್ವಾಮಿ, ರತ್ನಮ್ಮ, ನಾಗರಾಜ್, ಗಣೇಶ್ ಅವರುಗಳ ನೇತೃತ್ವದಲ್ಲಿ ಕೆಜಿಎಫ್ ತಾಲ್ಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ತಾಲ್ಲೂಕಿನ ಬೇತಮಂಗಲದ ಗ್ರಾಮದ ಹಳೆ ಬಡಾವಣೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ರೈತ ಮುಖಂಡರ ಸಭೆ ನಡೆಸಿ ಕೆಜಿಎಫ್ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ನಾಗರಾಜ್, ತಾಲ್ಲೂಕು ಅಧ್ಯಕ್ಷರಾಗಿ ಜಗದೀಶ್ ಕುಮಾರ್, ಉಪಾಧ್ಯಕ್ಷರಾಗಿ ಜರ್ನಾದನ್, ಕಾರ್ಯದರ್ಶಿಯಾಗಿ ಅಂಬರೀಶ್, ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್, ಸಂಚಾಲಕರಾಗಿ ಶ್ರೀನಿವಾಸ್, ವಿನೋದ್, ಬಾಬು ರಾವ್, ಖಜಾಂಚಿಯಾಗಿ ಮಂಜುನಾಥ್, ಲೋಕೇಶ್, ವೆಂಕಟೇಶ್ ಅವರುಗಳನ್ನು ಆಯ್ಕೆ ಮಾಡಿ ಆದೇಶ ಪತ್ರವನ್ನು ನೀಡಿ ಅಭಿನಂದನೆ ಸಲ್ಲಿಸಲಾಯಿತು.
ಈ ವೇಳೆ ಜಿಲ್ಲಾ ಸಂಚಾಲಕರಾದ ವಡ್ಡಹಳ್ಳಿ ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿ ರೈತರ ಸಮಸ್ಯೆಗಳ ವಿರುದ್ಧ ಹೋರಾಟ ಮಾಡುವ ಮೂಲಕ ರೈತರ ಸಮಸ್ಯೆಗಳನ್ನು ನಿವಾರಣೆ ಮಾಡಿದಂತೆ ರಾಜ್ಯದಲ್ಲೇ ಕೀರ್ತಿ ಪಡೆದಿರುವ ಪುಟ್ಟಣ್ಣಯ್ಯ ಬಣದ ರೈತ ಸಂಘಕ್ಕೆ ಜಿಲ್ಲಾ ಎಲ್ಲಾ ತಾಲ್ಲೂಕುಗಳಲ್ಲಿಯೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ರೈತರ ಮೇಲೆ ದಬ್ಬಾಳಿಕೆ, ರೈತರ ಬೆಳೆಗಳಿಗೆ ಬೆಲೆ ಸಮಸ್ಯೆ, ಕಾರಿಡಾರ್ ರಸ್ತೆಯ ರೈತರ ಜಮೀನಿಗಳಿಗೆ ಪರಿಹಾರ ದೊರೆಯದಿರುವುದು ಸೇರಿದಂತೆ ಅನೇಕ ಸಮಸ್ಯೆಗಳ ಮದ್ಯೆ ಜೀವಿಸುತ್ತಿರುವ ರೈತರ ಜತೆಗೆ ರೈತ ಸಂಘ ಹೋರಾಟಗಳನ್ನು ಮಾಡುವ ಮೂಲಕ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಿಳಿಸಿದರು.