PLACE YOUR AD HERE AT LOWEST PRICE
ಕೆಜಿಎಫ್:ಕೆಜಿಎಫ್ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಹಳೆ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆಂದು ಜೆಡಿಎಸ್ ಅಭ್ಯರ್ಥಿ ಡಾ.ರಮೇಶ್ ಬಾಬು ವಿರುದ್ಧ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ಹಳೆ ಕಾರ್ಯಕರ್ತರು ದೂರು ಮಾಡಿದರು.
ಜೆಡಿಎಸ್ ರಾಜ್ಯಾದ್ಯಕ್ಷ ಸಿ.ಎಂ.ಇಬ್ರಾಹಿಂ ಸುಂದರಪಾಳ್ಯದಲ್ಲಿ ನಡೆಯುವ ಉರುಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಬೇತಮಂಗಲದಲ್ಲಿ ಜೆಡಿಎಸ್ ಹಳೆ ಕಾರ್ಯಕರ್ತರು ಭೇಟಿ ಮಾಡಿ ಅಭ್ಯರ್ಥಿ ವಿರುದ್ಧ ಅಸಮದಾನ ವ್ಯಕ್ತಪಡಿಸಿದರು.
ಕೆಜಿಎಫ್ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಿದಾಗಿನಿಂದ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿ ಏಕಾದಿಪತಿಯಾಗಿ ಮುನ್ನಡೆಯುತ್ತಿದ್ದಾರೆ, ಪಕ್ಷ ಸಂಘಟನೆ ಮಾಡುವುದರ ಬದಲಾಗಿ ಪಕ್ಷದ ಕಾರ್ಯಕರ್ತರನ್ನು ಪಕ್ಷದಿಂದ ದೂರ ಮಾಡಿದ್ದಾರೆಂದು ಅಸಮಾದಾನ ಹೊರ ಹಾಕಿದರು.
ಸುಮಾರು 20 ವರ್ಷಗಳ ಕಾಲ ಜೆಡಿಎಸ್ ಶಾಸಕರು ಇಲ್ಲದಿದ್ದರು ಪಕ್ಷದ ಅಭಿಮಾನದಿಂದ ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ದೂರ ಮಾಡಿದ್ದಾರೆ, ಪಕ್ಷದ ನಾಯಕರಾದ ತಾವು ಗೊಂದಲಗಳಿಗೆ ತೆರೆ ಎಳೆಯಬೇಕೆಂದರು.
ಅಭ್ಯರ್ಥಿ ಡಾ.ರಮೇಶ್ ಬಾಬು ಎದುರುಗಡೆಯೇ ಪಕ್ಷದ ಹಳೆಯ ಕಾರ್ಯಕರ್ತರು ಪಕ್ಷದ ರಾಜ್ಯಾದ್ಯಕ್ಷರ ಬಳಿ ಅಸಮದಾನ ವ್ಯಕ್ತಪಡಿಸುವ ವೇಳೆ ಜೆಡಿಎಸ್ ಅಭ್ಯರ್ಥಿ ಡಾ.ರಮೇಶ್ ಬಾಬು ಸ್ಥಳದಲ್ಲಿದ್ದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಲಕ್ಷ್ಮೀನಾರಾಯಣ್, ಗ್ರಾಪಂ ಮಾಜಿ ಉಪಾಧ್ಯಕ್ಷ ಯೋಗೇಶ್, ಮುಖಂಡರಾದ ಅಂಬರೀಶ್, ಹಂಗಳ ಶ್ರೀನಾಥ್, ಕೋಗಿಲಹಳ್ಳಿ ಶ್ರೀನಾಥ್, ಭರತ್, ಪ್ರಸಾದ್, ರವಿ, ಸಂತೋಷ್, ಶ್ರೀಕಾಂತ್ ಮೊದಲಾದವರಿದ್ದರು.