• Fri. May 3rd, 2024

PLACE YOUR AD HERE AT LOWEST PRICE

ಕೆಜಿಎಫ್: ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಡಾ.ರಮೇಶ್ ಬಾಬು ಮೇಲಿನ ಅಸಮಾದಾನವನ್ನು ಕುಮಾರಸ್ವಾಮಿ ಗಮನಕ್ಕೆ ತರಲು ಗ್ರಾಮೀಣ ಭಾಗದ ಜೆಡಿಎಸ್ ಮುಖಂಡರು ತಿರ್ಮಾನಿಸಿದ್ದಾರೆ.

ಬೇತಮಂಗಲ ಗ್ರಾಮದ ಪ್ರವಾಸಿ ಮಂದಿರದ ಬಳಿ ಗ್ರಾಮಾಂತರ ಭಾಗದ ಜೆಡಿಎಸ್ ಪಕ್ಷದ ಮುಖಂಡರು ಸಭೆ ನಡೆಸಿ ಮಾತನಾಡಿ, ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರು ಕೆಜಿಎಫ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದಾಗಿನಿಂದಲ್ಲೂ ಅಭ್ಯರ್ಥಿಯು ಸ್ಥಳೀಯ ಹಾಗೂ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆಂದು ಆರೋಪಿಸಿದರು.

ಈಗಾಗಲೇ ಅಭ್ಯರ್ಥಿಯ ನಡವಳಿಕೆಯ ಬಗ್ಗೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಗಮನಕ್ಕೆ ತರಲಾಗಿದೆ, ಅದೇ ರೀತಿಯಲ್ಲಿ ಶೀಘ್ರವಾಗಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಅಭ್ಯರ್ಥಿಯ ನಡವಳಿಕೆಯ ಬಗ್ಗೆ ತಿಳಿಸುವುದಾಗಿ ತಿಳಿಸಿದರು.

ಜೆಡಿಎಸ್ ಅಭ್ಯರ್ಥಿಯು ಕಾರ್ಯಕರ್ತರನ್ನು ಹಾಗೂ ಮುಖಂಡರನ್ನು ಒಗ್ಗೂಡಿಸಿಕೊಂಡು ಪಕ್ಷ ಸಂಘಟನೆ ಮಾಡುವುದನ್ನು ಬಿಟ್ಟು ಪಕ್ಷದ ಕಾರ್ಯಕರ್ತರನ್ನು ಗುಂಪು- ಗುಂಪುಗಳಾಗಿ ವಿಭಜನೆ ಮಾಡಿದ್ದಾರೆಂದು ಆರೋಪಿಸಿದರು.

ಸಭೆಯಲ್ಲಿ ಎಪಿಎಂಸಿ ನಿರ್ದೇಶಕ ಚಲಪತಿ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಚಂಗೇಗೌಡ, ಲಕ್ಷ್ಮೀನಾರಾಯಣ್, ಗ್ರಾಪಂ ಮಾಜಿ ಉಪಾಧ್ಯಕ್ಷ ಯೋಗೇಶ್, ಮುಖಂಡರಾದ ಪ್ರಸಾದ್,  ಸಂತೋಷ್, ಹಂಗಳ ಶ್ರೀನಾಥ್, ಕೋಗಿಲಹಳ್ಳಿ ಶ್ರೀನಾಥ್, ಮಹೇಶ್, ರವಿ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!