PLACE YOUR AD HERE AT LOWEST PRICE
ಕೆಜಿಎಫ್: ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಡಾ.ರಮೇಶ್ ಬಾಬು ಮೇಲಿನ ಅಸಮಾದಾನವನ್ನು ಕುಮಾರಸ್ವಾಮಿ ಗಮನಕ್ಕೆ ತರಲು ಗ್ರಾಮೀಣ ಭಾಗದ ಜೆಡಿಎಸ್ ಮುಖಂಡರು ತಿರ್ಮಾನಿಸಿದ್ದಾರೆ.
ಬೇತಮಂಗಲ ಗ್ರಾಮದ ಪ್ರವಾಸಿ ಮಂದಿರದ ಬಳಿ ಗ್ರಾಮಾಂತರ ಭಾಗದ ಜೆಡಿಎಸ್ ಪಕ್ಷದ ಮುಖಂಡರು ಸಭೆ ನಡೆಸಿ ಮಾತನಾಡಿ, ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರು ಕೆಜಿಎಫ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದಾಗಿನಿಂದಲ್ಲೂ ಅಭ್ಯರ್ಥಿಯು ಸ್ಥಳೀಯ ಹಾಗೂ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆಂದು ಆರೋಪಿಸಿದರು.
ಈಗಾಗಲೇ ಅಭ್ಯರ್ಥಿಯ ನಡವಳಿಕೆಯ ಬಗ್ಗೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಗಮನಕ್ಕೆ ತರಲಾಗಿದೆ, ಅದೇ ರೀತಿಯಲ್ಲಿ ಶೀಘ್ರವಾಗಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಅಭ್ಯರ್ಥಿಯ ನಡವಳಿಕೆಯ ಬಗ್ಗೆ ತಿಳಿಸುವುದಾಗಿ ತಿಳಿಸಿದರು.
ಜೆಡಿಎಸ್ ಅಭ್ಯರ್ಥಿಯು ಕಾರ್ಯಕರ್ತರನ್ನು ಹಾಗೂ ಮುಖಂಡರನ್ನು ಒಗ್ಗೂಡಿಸಿಕೊಂಡು ಪಕ್ಷ ಸಂಘಟನೆ ಮಾಡುವುದನ್ನು ಬಿಟ್ಟು ಪಕ್ಷದ ಕಾರ್ಯಕರ್ತರನ್ನು ಗುಂಪು- ಗುಂಪುಗಳಾಗಿ ವಿಭಜನೆ ಮಾಡಿದ್ದಾರೆಂದು ಆರೋಪಿಸಿದರು.
ಸಭೆಯಲ್ಲಿ ಎಪಿಎಂಸಿ ನಿರ್ದೇಶಕ ಚಲಪತಿ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಚಂಗೇಗೌಡ, ಲಕ್ಷ್ಮೀನಾರಾಯಣ್, ಗ್ರಾಪಂ ಮಾಜಿ ಉಪಾಧ್ಯಕ್ಷ ಯೋಗೇಶ್, ಮುಖಂಡರಾದ ಪ್ರಸಾದ್, ಸಂತೋಷ್, ಹಂಗಳ ಶ್ರೀನಾಥ್, ಕೋಗಿಲಹಳ್ಳಿ ಶ್ರೀನಾಥ್, ಮಹೇಶ್, ರವಿ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.