• Sat. Jul 27th, 2024

ಕೇಂದ್ರ ಸರ್ಕಾರ ಅಡುಗೆ ಅನಿಲ ದರ ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ತೊಘಲಕ್ ದರ್ಬಾರ್ ನಡೆಸುತ್ತಿದೆ – ಕೋಟಿಗಾನಹಳ್ಳಿ ಗಣೇಶಗೌಡ ಆಕ್ರೋಶ

PLACE YOUR AD HERE AT LOWEST PRICE

ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಡುಗೆ ಅನಿಲ ದರವನ್ನು ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ತೊಘಲಕ್ ದರ್ಬಾರ್ ನಡೆಸುತ್ತಿದೆ ಎಂದು ನಮ್ಮ ಕೋಲಾರ ರೈತ ಸಂಘದ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಗಣೇಶಗೌಡ ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದು ೯ ವರ್ಷವಾಯಿತು. ಅಚ್ಚೆ ದಿನ್ ಹೆಸರಿನಲ್ಲಿ ದೇಶದಲ್ಲಿ ಆರ್ಥಿಕ ದಿವಾಳಿಯೆಬ್ಬಿಸಲು ಮುಂದಾಗಿದೆ. ರೈತರು, ಕಾರ್ಮಿಕರು, ದುಡಿಯುವ ವರ್ಗಕ್ಕೆ ಅನುಕೂಲವಾಗುವಂತಹ ಜನಪರ ಯೋಜನೆಗಳನ್ನು ಜಾರಿಗೆ ತರುವುದು ಬಿಟ್ಟು ಅವರನ್ನು ಆರ್ಥಿಕವಾಗಿ ದಿವಾಳಿಯೆಬ್ಬಿಸುತ್ತಿದೆ.

ದೇಶದಲ್ಲಿ ರೈತರ ಮೇಲೆ ಕೆಲವು ಕಾಯ್ದೆಗಳನ್ನು ಬಲವಂತವಾಗಿ ಹೇರಿಕೆ ಮಾಡಲಾಗುತ್ತಿದೆ. ಇದನ್ನು ವಿರೋಧಿಸುವ ರೈತರನ್ನು ಬಂಧಿಸಿ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ದೇಶದ ಜನರು ರೊಚ್ಚಿಗೇಳುವ ಕಾಲ ಸನ್ನಿಹಿತವಾಗಿದೆ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಕೂಡಲೇ ಹೇರಿಕೆ ಮಾಡಿರುವ ಸಿಲಿಂಡರ್ ದರವನ್ನು ಇಳಿಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆಗೆ ರಾಜ್ಯ ಗೌರವಾಧ್ಯಕ್ಷ ಕೆ.ಸಿ.ಪಿ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಯಲವಾರ ವಿಶ್ವನಾಥಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ನರಸಾಪುರ ಶ್ರೀಧರ್, ಜಿಲ್ಲಾ ಗೌರವಾಧ್ಯಕ್ಷ ಕೆಂಬೋಡಿ ಕೃಷ್ಣೇಗೌಡ, ಜಿಲ್ಲಾ ಸಂಚಾಲಕ ಅಬ್ಬಣಿ ಮುನೇಗೌಡ, ಸಂಘಟನಾ ಕಾರ್ಯದರ್ಶಿ ಎ.ವಿ.ಎನ್.ಸ್ವಾಮಿ, ಸಂಘಟನಾ ಕಾರ್ಯದರ್ಶಿ ಮಾರ್ಜೇನಹಳ್ಳಿ ನಾರಾಯಣಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಳಲಿ ನಾರಾಯಣಪ್ಪ, ಕೋಲಾರ ತಾಲ್ಲೂಕು ಅಧ್ಯಕ್ಷ ಶಿಳ್ಳಂಗೆರೆ ಗೋಪಾಲ್, ಕೋಲಾರ ತಾಲ್ಲೂಕು ಕಾರ್ಯದರ್ಶಿ ದೊಡ್ನಹಳ್ಳಿ ವೆಂಕಟರಾಮಪ್ಪ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

You missed

error: Content is protected !!